February 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾತಿನಿಂದ ಪೊಲೀಸರಿಗೆ ಮನವಿ

ಬಿ.ಸಿ. ರೋಡ್ : ಮಿತ್ತಬೈಲ್ ಜಮಾಅತ್ ವ್ಯಾಪ್ತಿಯ ಶಾಂತಿ ಅಂಗಡಿ ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕಿಯರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನವನ್ನು ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಅದ್ದೇಡಿ ನೇತೃತ್ವದ ನಿಯೋಗ ಬಂಟ್ವಾಳ ನಗರ ಠಾಣಾಧಿಕಾರಿಯನ್ನು  ಭೇಟಿಯಾಗಿ  ಮನವಿ ಸಲ್ಲಿಸಿದರು.

ಸಪ್ಟಂಬರ್ 22ರಂದು ಬಾಲಕಿಯರು ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಿಂದ ಒಂದೇ ಮನೆಯ ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದು ಒಂದು ತಿಂಗಳು ಕಳೆದರೂ ಡಿಕ್ಕಿಯಾದ ವಾಹನ ಇದುವರೆಗೂ ಪತ್ತೆಯಾಗಿಲ್ಲ. ಆದುದರಿಂದ ತಕ್ಷಣ ತಪ್ಪಿತಸ್ಥ ವಾಹನ ಹಾಗೂ ಚಾಲಕನನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಹಾಗೂ ಕುಟುಂಬಸ್ಥರಿಗೆ ನ್ಯಾಯ ಒದಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಮಾತ್ ಉಪಾಧ್ಯಕ್ಷ ಜಮಾಲ್, ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಕಾರ್ಯದರ್ಶಿ ಅಶ್ರಫ್ ಶಾಂತಿ ಅಂಗಡಿ ಉಪಸ್ಥಿತರಿದ್ದರು.

You may also like

News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ,
News

ಅಮೆರಿಕದಲ್ಲಿ ರಸ್ತೆ ಅಪಘಾತ

ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಭಾರಿ ಪರಿಹಾರ ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ 2023ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ

You cannot copy content of this page