August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ಟೋಬರ್ 27ರಂದು ಕೊಡಾಜೆ ಐಕ್ಯ ವೇದಿಕೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ :  ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಕೊಡಾಜೆ ಖಬರಸ್ತಾನ್ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅಕ್ಟೋಬರ್ 27ರಂದು ನಡೆಯಲಿದೆ. ಕಾರ್ಯಕ್ರಮವನ್ನು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬರಾದ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಉದ್ಘಾಟಿಸಲಿದ್ದು, ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಡಾಜೆ ಬಿ.ಜೆ.ಎಂ. ಅಧ್ಯಕ್ಷ ಹಾಜಿ ಇಬ್ರಾಹಿಂ ರಾಜ್ ಕಮಲ್, ಕೋಶಾಧಿಕಾರಿ ಹಾಜಿ ಮುಹಮ್ಮದ್ ರಫೀಕ್ ಸುಲ್ತಾನ್, ಕಾರ್ಯದರ್ಶಿ ನವಾಝ್ ಭಗವಂತ ಕೋಡಿ, ಕೊಡಾಜೆ ಮಸೀದಿ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಹಾಜಿ ಫಾರೂಕ್ ಸುಲ್ತಾನ್, ಕೋಶಾಧಿಕಾರಿ ಹಾಜಿ ಉಮ್ಮರ್ ರಾಜ್ ಕಮಲ್, ಕಾರ್ಯದರ್ಶಿ ಯೂಸುಫ್ ಸಹೀದ್ ಹಾಗೂ ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದ್ರಸ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಜಿ ರಹೀಂ ಸುಲ್ತಾನ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಪತ್ರಿಕಾ ಕಾರ್ಯದರ್ಶಿಗಳಾದ ನೌಫಳ್ ಕೊಡಾಜೆ ಹಾಗೂ ಸಲೀಂ ಮಾಣಿ ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page