July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ

ಬಂಟ್ವಾಳ ತಾಲೂಕಿನ ತುಂಬೆಯ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ  ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ನವಂಬರ್ 5ರಂದು ಮಂಗಳವಾರ ಮುಂಜಾನೆ ವೇಳೆಗೆ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

    ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದೂವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣ, ಗೊದ್ರೇಜ್, ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌. ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌.ಆರ್. ನ್ನು ಕೂಡ ಬಿಡದೆ ಎಗರಿಸಿದ್ದಾರೆ.

ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6 ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page