May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರಿ – ಕ್ಷೇತ್ರ ಶಿಕ್ಷಣಾಧಿಕಾರಿ

ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು. ಉತ್ತಮ ಹವ್ಯಾಸ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್.ಜಿ. ಹೇಳಿದರು. ಅವರು ನವಂಬರ್ 5ರಂದು ಬಂಟ್ವಾಳದ ದೀಪಿಕಾ ಪ್ರೌಢಶಾಲೆ ಮೊಡಂಕಾಪುವಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೊಡಂಕಾಪು ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಮೆಲ್ವಿನ್ ಲೋಬೋ ಶುಭ ಹಾರೈಸಿದರು. ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿ ವಿದ್ಯಾ ಮಾನ್ಯ, ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಮುಖ್ಯ ಗುರುಗಳ ಸಂಘದ ಅಧ್ಯಕ್ಷೆ ಪ್ರೇಮಾ, ಜಿ.ಪಿ.ಟಿ. ಸಂಘದ ಕಾರ್ಯದರ್ಶಿ ರಾಜೇಶ್, ಸರಕಾರಿ ಪ್ರೌಢ ಶಾಲೆ ಪೊಳಲಿಯ ಸುಮನ ವೇದಿಕೆಯಲ್ಲಿದ್ದರು. ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್, ಜಯಾನಂದ ಪೆರಾಜೆ, ಬಿ. ರಾಮಚಂದ್ರ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಸುಜಾತ ಸ್ವಾಗತಿಸಿ ನಿರೂಪಿಸಿದರು.

ವಿವಿಧ ಸ್ಪರ್ಧೆಗಳ ಫಲಿತಾಂಶ : ಪ್ರಥಮ, ದ್ವಿತೀಯ, ತೃತೀಯ ಸ್ಥಾನ ವಿಜೇತರು.

ಪ್ರೌಢಶಾಲಾ ವಿಭಾಗ

  1. ಆಶುಭಾಷಣ – ಗೋಪಾಲಕೃಷ್ಣ ನೇರಳಕಟ್ಟೆ, ರಂಜಿತಾ ರಾಜೀವ ಟಿ. ಪೊಳಲಿ, ಚೇತನಾ ಪಿ. ಮೊಡಂಕಾಪು.
  2. ಭಾವಗೀತೆ – ವಿಜಯಲಕ್ಷ್ಮೀ ಮಂಚಿ, ಜಯರಾಮ ಮಾಣಿ, ಸುಧೀರ್ ಕೊಡಂಗೆ.
  3. ಪ್ರಬಂಧ – ಸವಿತಾ ಕನ್ಯಾನ, ಅನಿತಾ ಮೊಡಂಕಾಪು, ಸವಿತಾ ಮೊಡಂಕಾಪು.
  4. ಪಾಠೋಪಕರಣ – ಶಂಕರ್ ವೆಂಕಪ್ಪ ಗೋಳ್ತಮಜಲು, ರಮ್ಯಾ ಕೊಯಿಲ, ಉಮಾದೇವಿ ಮೊಡಂಕಾಪು.
  5. ಚಿತ್ರ – ಚೆನ್ನಕೇಶವ ಡಿ.ಆರ್. ಪೆರ್ನೆ, ಸತ್ಯಶಂಕರ್ ಕಡೇಶಿವಾಲಯ, ಅಮೀನಶೇಕ್ ಸಿದ್ದಕಟ್ಟೆ.
  6. ರಸಪ್ರಶ್ನೆ (ಸಾಮಾನ್ಯ ಜ್ಞಾನ) – ಪ್ರವೀಣ್ ಕುಮಾರ್ ಎಮ್. ಬೊಳಂತಿಮೊಗರು, ಇಮ್ತಿಯಾಝ್ ಪಂಜಿಕಲ್ಲು, ಮಾರ್ಕ್ ಪಿಂಟೋ ಪಂಜಿಕಲ್ಲು.
  7. ರಸಪ್ರಶ್ನೆ (ವಿಜ್ಞಾನ) – ರಾಧಾಕೃಷ್ಣ ಮೂಲ್ಯ ವಾಮದಪದವು, ಲಿನೆಟ್ ಸುನಿತಾ ಲೋಬೋ ಮೊಡಂಕಾಪು, ವಿದ್ಯಾ ಮಾನ್ಯ ಬಂಟ್ವಾಳ.

ಪ್ರಾಥಮಿಕ ವಿಭಾಗ

  1. ಆಶು ಭಾಷಣ – ರಮೇಶ್ ಬಿ.ಎಸ್. ಮಾಣಿ, ಪ್ರಾನ್ಸಿಸ್ ಡೇಸಾ ಕಂಚಿನಡ್ಕಪದವು, ರವಿ ಕೆ. ತೆಂಕಕಜೆಕಾರು.
  2. ಭಾವಗೀತೆ – ಗೀತಾ ಕಾಡಬೆಟ್ಟು, ರಮಾ ಕನ್ಯಾನ, ರಾಜೇಶ್ ಕೆ. ಬಡಗಕಜೆಕಾರು.
  3. ಪ್ರಬಂಧ – ಹರಿಣಾಕ್ಷಿ ದೇವಸ್ಯಮೂಡೂರು, ರಶ್ಮಿ ಸುರಿಬೈಲು, ನಂದಿನಿ ಎಸ್. ಕೆದಿಲ ಗಡಿಯಾರ.
  4. ಪಾಠೋಪಕರಣಗಳ ತಯಾರಿ – ನಮಿತ ನಾಟಿ, ರಾಘವೇಂದ್ರ ಬಿ. ಕುಜಿಲಬೆಟ್ಟು, ಚಂದ್ರಾವತಿ ಲಕ್ಷ್ಮೀಕೋಡಿ.
  5. ಚಿತ್ರ ಬರೆಯುವುದು – ಉಷಾ ಪಿಲಿಮೊಗರು, ಸುಮನ ಸುಜೀರು, ಸೀತಾರಾಮ ಮೇಲ್ಪತ್ರೆ.
  6. ರಸಪ್ರಶ್ನೆ (ಸಾಮಾನ್ಯ ಜ್ಞಾನ) – ಅಕ್ಬರ್ ಅಲಿ ಉಳಿಬೈಲು, ರಘುವೀರ ಸಜಿಪಮುನ್ನೂರು, ಹುಸೇನಮಿಯಾ ಅಜ್ಜಿನಡ್ಕ.
  7. ರಸಪ್ರಶ್ನೆ (ವಿಜ್ಞಾನ)- ಪುಷ್ಪಾವತಿ ವೈ. ಕಲ್ಲಜೇರ, ನಾಗವೇಣಿ ಅಮ್ಮೆಮ್ಮಾರ್, ಕಿಶೋರಿ ಮಧ್ವ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page