January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
Bible Quotes

ನವಂಬರ್ 9 ಮತ್ತು 10ರಂದು ಜಿಲ್ಲೆಯಲ್ಲಿ ಮತದಾರರ ಮಿಂಚಿನ ನೋಂದಣಿ

ಮಂಗಳೂರು : ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನವಂಬರ್ 9, 10 ಮತ್ತು 23, 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆಯಲಿದೆ. ಎಲ್ಲಾ ಬೂತು ಮಟ್ಟದ ಅಧಿಕಾರಿಗಳು ಹಾಗೂ ಬಿಎಲ್‌ಒ ಮೇಲ್ವಿಚಾರಕರು ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೆ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 1, ಎಪ್ರಿಲ್ 1, ಜುಲೈ 1, ಅಕ್ಟೋಬರ್ 1) 18 ವರ್ಷ ಪ್ರಾಯ ತುಂಬುವ ಯುವ ಮತದಾರರಿಂದ ನಮೂನೆ-6ನ್ನು ಸ್ವೀಕರಿಸುವರು.

ವಲಸೆಹೋದ/ಮೃತಪಟ್ಟ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ನಮೂನೆ 7ನ್ನು ಸ್ವೀಕರಿಸುವರು. ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ನಮೂದುಗಳಲ್ಲಿ ವಿಳಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸುವಿಕೆ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಚೀಟಿ (ಎಪಿಕ್) ನೀಡುವಿಕೆ ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ಮನವಿ ಹಾಗೂ ಯಾವುದಾದರು ತಿದ್ದುಪಡಿ ಅವಶ್ಯವಿದ್ದಲ್ಲಿ ನಮೂನೆ 8ನ್ನು ಸ್ವೀಕರಿಸುವರು. ಸಾರ್ವಜನಿಕರಿಂದ/ಮತದಾರರಿಂದ ಸ್ವೀಕರಿಸಲ್ಪಟ್ಟ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆ ದಿನ ಸಂಜೆ ಬಿಎಲ್‌ಒ ಕಚೇರಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲು ಸೂಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

You may also like

Bible Quotes

ಮುಚ್ಚುವ ಸರಕಾರಿ ಶಾಲೆಗೆ ಪುನರ್ ಜನ್ಮ ಕೊಟ್ಟ ಶಿಕ್ಷಕಿ ಸಲ್ಡಾನ್ಹಾ ಇವರಿಗೆ ವ್ಯಾಪಕ ಪ್ರಶಂಸೆ

ಮಂಗಳೂರು : ‘ಮನಸ್ಸಿದ್ದರೆ ಮಾರ್ಗ’ ಎಂಬ ನಾನ್ನುಡಿಯಂತೆ ‘ಸರಕಾರಿ ಕೆಲಸ ದೇವರ ಕೆಲಸ’ ಎಂದು ದೇವರ ಮೇಲೆ ವಿಶ್ವಾಸ ವಿಟ್ಟು ಜನರ ಸಹಕಾರದಿಂದ ಶಿಕ್ಷಕಿ ಸಲ್ಡಾನ್ಹಾ ಮಾಡಿದ
Bible Quotes

Bible Quote: Psalm 34:18 | 30-Jan-2023

Bible Quote for the day Psalm 34:18 The LORD is close to the brokenhearted and saves those who are crushed

You cannot copy content of this page