January 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ – ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ ಮಾರ್ಗದರ್ಶನದಲ್ಲಿ ದಿಢೀರ್ ದಾಳಿ

ಮಂಗಳೂರು ನವಂಬರ್ 7 : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

You may also like

News

ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ಜನವರಿ 8 ಮತ್ತು 9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ
News

ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಗೆ ಸಾರ್ವಜನಿಕರಿಂದ ಭಾರೀ ವಿರೋಧ ಮತ್ತು ಆಕ್ರೋಶ

ಯೋಜನೆ ನಿಲ್ಲಿಸದಿದ್ದಲ್ಲಿ ರೈತರಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಮಂಗಳೂರು: ಪ್ರಸ್ತಾವಿತ ಉಡುಪಿ- ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಯೋಜನೆ ವಿರೋಧಿಸಿ, ಜನವರಿ

You cannot copy content of this page