April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಿಂದುಳಿದ ವರ್ಗದ ಧಾರ್ಮಿಕ ಸಮಾನತೆಯ ಹರಿಕಾರರು ನಾರಾಯಣ ಗುರುಗಳು – ಗಣೇಶ್ ಪೂಂಜರೆಕೋಡಿ

ಬಂಟ್ವಾಳ : ನಾರಾಯಣ  ಗುರುಗಳು ಎಲ್ಲಾ ಹಿಂದುಳಿದ ವರ್ಗದವರಿಗೆ ಧೈರ್ಯ ತುಂಬಿ ಈ ಭೂಮಿಯಲ್ಲಿ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಮಾಡಿದ ಕ್ರಾಂತಿಯಿಂದಾಗಿ ಇಂದು ಎಲ್ಲಾ ಹಿಂದುಳಿದ ಮಧ್ಯಮ‌ ವರ್ಗದ ಜನರು ಮುನ್ನಡೆಯುವಂತಾಗಿದೆ‌ ಎಂದು ಯುವವಾಹಿನಿ ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಅವರು ನವಂಬರ್ 7 ರಂದು ಸುಲತ ಬಿ.ಸಿ. ರೋಡ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 19ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಧನುಷ್ ಮಧ್ವ, ಉದಯ್ ಮೆನಾಡ್, ಗೀತಾ ಜಗದೀಶ್, ನಿಕಟಪೂರ್ವ ಅಧ್ಯಕ್ಷ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ರಾಜೇಶ್ ಸುವರ್ಣ, ಅರುಣ್ ಬಿ.ಸಿ. ರೋಡ್, ಸದಸ್ಯರಾದ ನಾಗೇಶ್ ಏಲಬೆ, ಸೂರಜ್ ತುಂಬೆ, ಹರೀಶ್ ಅಜೆಕಲಾ, ವಿಘ್ನೇಶ್ ಬೊಳ್ಳಾಯಿ, ಯಶೋಧರ ಕಡಂಬಲ್ಕೆ, ನಯನಾ ಪಚ್ಚಿನಡ್ಕ, ತೃಪ್ತಿ ಪಚ್ಚಿನಡ್ಕ, ಸುದೀಪ್ ರಾಯಿ, ಸಂದೀಪ್ ಬೊಳ್ಳಾಯಿ, ಅರ್ಜುನ್ ಅರಳ, ಯತೀಶ್ ಬೊಳ್ಳಾಯಿ, ಮತ್ತಿತರರು ಉಪಸ್ಥಿತರಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page