November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ್ಪಿನಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಶಿಕ್ಷಣದ ಕಾರ್ಯಾಗಾರ

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ನವಂಬರ್ 5ರಂದು “ಆರೋಗ್ಯ ಶಿಕ್ಷಣ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ”ವನ್ನು ನಡೆಸಲಾಯಿತು.

ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಹೆಚ್.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಭೌತಿಕ ಮತ್ತು ಮಾನಸಿಕ ಅರೋಗ್ಯದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಡಾ. ಮೊಯಿದ್ದೀನ್ ಆಶಿಕ್ MBBS ಹಾಗೂ ಡಾ. ಮರಿಯಂ ರೆನಿಶಾ ಬಸ್ತಿಕಾರ್ MBBS ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಕೆಲವೊಂದು ಪ್ರಯೋಗದ ಮುಖೇನ ಮಾಹಿತಿಯನ್ನು ನೀಡಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಎಂ. ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರು  ಉಪಸ್ಥಿತರಿದ್ದರು.

 

ರಾಜ್ಯಶಾಸ್ತ್ರ ಉಪನ್ಯಾಸಕರಾದ ರಮೇಶ್ ಹೆಚ್.ಜೆ. ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಡಾ. ಮಂಜುಳಾ ಎಸ್. ಬಣಾಕರ್ ವಂದಿಸಿದರು. ವಿದ್ಯಾರ್ಥಿನಿ ರಶ್ಮಿ ಪ್ರಾರ್ಥಿಸಿ, ಜೀವಶಾಸ್ತ್ರ ಉಪನ್ಯಾಸಕಿ ಸುಲಕ್ಷಣ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page