August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಕ್ಸೊ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಬಾಲಕಿಯ ಕುಟುಂಬಕ್ಕೆ ರೂಪಾಯಿ 5 ಲಕ್ಷ ಪರಿಹಾರ – ತೀರ್ಪು ಪ್ರಕಟ

ನ್ಯಾಯ ಒದಗಿಸಿ ಕೊಟ್ಟ ಪೊಲೀಸ್ ನಿರೀಕ್ಷಕ ಜೋನ್ಸನ್ ಡಿಸೋಜ ರವರಿಗೆ ವ್ಯಾಪಕ ಪ್ರಶಂಸೆ

ಮಂಗಳೂರು : ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಎಂಬಲ್ಲಿ 4 ವರ್ಷಗಳ ಹಿಂದೆ 8 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ (ಪೋಕ್ಸೊ) ಪ್ರಕರಣದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಲ್ಲಿ ತ್ವರಿತಗತಿ ವಿಚಾರಣೆ ನಡೆಸಿ 3 ಜನ ಆರೋಪಿಗಳಿಗೆ  ಜೀವಾವಧಿ ಶಿಕ್ಷೆ ಮತ್ತು  ಬಾಲಕಿಯ ಕುಟುಂಬಕ್ಕೆ ರೂಪಾಯಿ 5 ಲಕ್ಷ ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದೆ.

ಪ್ರಕರಣದವನ್ನು ಬೇಧಿಸಿ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂಬ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೆ ದಕ್ಷತೆ ಹಾಗೂ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಿಸಿ ಬಾಲಕಿಗೆ ಮತ್ತು ಅವಳ ಕುಟುಂಬಕ್ಕೆ ನ್ಯಾಯ ಒದಗಿಸಿಕೊಟ್ಟ ನಿಷ್ಠಾವಂತ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾರವರು ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page