August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

E-KYC ಮಾಡದಿದ್ದರೆ ರೇಷನ್ ಕಾರ್ಡ್ ರದ್ದು!

ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಗಳು ಮುಖ್ಯ. ಜೊತೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್‌ ಕಾರ್ಡ್‌ ಮುಖ್ಯವಾಗಿದೆ. ಈ ರೇಷನ್‌ ಕಾರ್ಡ್‌ ಅಪ್ಡೇಟ್‌ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಕಡ್ಡಾಯವಾಗಿ ಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ:

* ಪಡಿತರ ಚೀಟಿಯ ಮೂಲ ಪ್ರತಿ

* ಕುಟುಂಬದ ಯಜಮಾನ ಹಾಗೂ ಎಲ್ಲಾ ಸದಸ್ಯರ ಆಧಾರ್ ಕಾರ್ಡ್

* ಬ್ಯಾಂಕ್ ಪಾಸ್‌ ಬುಕ್‌

* ಕುಟುಂಬದ ಯಜಮಾನನ ಎರಡು ಪಾಸ್‌ ಪೋರ್ಟ್ ಸೈಜ್ ಪೋಟೋ

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page