May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕದ ಹೆಮ್ಮೆಯ KSRTC ಸಂಸ್ಥೆಗೆ ‘ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ’

ಬೆಂಗಳೂರು: ಕರ್ನಾಟಕದ ಹೆಮ್ಮೆಯ KSRTC ಸಂಸ್ಥೆಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ.

 

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಹಂಚಿಕೊಂಡಿದ್ದು, ನಿಗಮಕ್ಕೆ, ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18ನೇ ವಿಶ್ಚ ಸಂವಹನ ಸಮ್ಮೇಳನ 2024 ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿಯು ಲಭಿಸಿದೆ. KSRTCಯ ಕಾರ್ಮಿಕ ಸ್ನೇಹಿ, ಪ್ರಯಾಣಿಕ ಸ್ನೇಹಿ ಉಪಕ್ರಮಗಳಿಗೆ ಹಾಗೂ ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್ ಕಾರ್ಯಕ್ಕೆ ಸದರಿ ಪ್ರಶಸ್ತಿಯು ಲಭಿಸಿರುತ್ತದೆ ಎಂದಿದೆ.

ಶ್ರೀಪಾದ್ ಯೆಸ್ಸೋ ನಾಯ್ಕ್, ರಾಜ್ಯ ಸಚಿವರು, ಭಾರತ ಸರ್ಕಾರ, ಇಂಧನ, ನವೀನ ಮತ್ತು ನವೀಕರಿಸಿದ ಇಂಧನ ಸಚಿವಾಲಯ, ಮತ್ತು 2024ನೇ ವರ್ಷದ ಮಿಸ್ ಗ್ಲೋಬಲ್ ಇಂಡಿಯಾ ಸ್ವೀಸೆಲ್ ಮರಿಯಾ ಫುರ್ಥಾಡೋ, PRCI ರಾಷ್ಟ್ರೀಯ ಅಧ್ಯಕ್ಷೆ ಗೀತಾ ಶಂಕರ್ ಅವರು ಮಂಗಳೂರು ನಗರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ KSRTCಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು ಎಂದಿದೆ.

 

ಮೈಸೂರು ನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಹೆಚ್.ಟಿ., ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮತ್ತು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಬಿ. ಹೊಸಪೂಜಾರಿ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು ಎಂದು ತಿಳಿಸಿದೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page