April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಮದಪದವು ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ತರಗತಿ ಪ್ರಾರಂಭ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಳ ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು.

ಜನಜಗೃತಿ ವೇದಿಕೆ ಸದಸ್ಯರಾದ ನವೀನ್ ಚಂದ್ರಶೆಟ್ಟಿ ಯವರು ತರಗತಿಯನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳು ರಾಜ್ಯದ್ಯಾನಂತ ಉತ್ತಮವಾಗಿ ನಡೆಯುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಕನಕ್ಕಾಗಿ ಹಲವಾರು ಕಾರ್ಯಕ್ರಮಗಳಿದ್ದು ಮಕ್ಕಳ ಮುಂದಿನ ಭವಿಷ್ಯ ಕ್ಕೆ ಎಸ್.ಎಸ್.ಎಲ್.ಸಿ. ಅಂಕ ಮುಖ್ಯವಾಗಿರುತದೆ ಅದಕ್ಕೋಸ್ಕರ ಉಚಿತವಾಗಿ ಟ್ಯೂಷನ್ ತರಗತಿಗಳನ್ನು ಪ್ರಾರಂಭಿಸಲಾಗಿದೆ ಇದರ ಸದುಪಯೋಗವನ್ನು ಮಕ್ಕಳು ಪಡೆದು ಕೊಂಡು ಬರುವ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಆಗಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾoಶುಪಾಲ ಬಾಲಕೃಷ್ಣ ಎಲ್., ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟ ಅಧ್ಯಕ್ಷ ಅನಿತ ಪ್ರಭು, ಜ್ಞಾನವಿಕಾಸ ಸಂಯೋಜಕಿ ಗುಣವತಿ, ವಲಯ ಮೇಲ್ವಿಚಾರಕಿ ಸವಿತಾ, ಸೇವಾಪ್ರತಿನಿಧಿ ಮೋಹನ್ ದಾಸ್ ಭಾರತಿ, ಶಿಕ್ಷಕರಾದ ಸುಧಾಕರ್, ಅಮೃತ, ಮಮತಾ, ಶಾಂತಲಾ, ಶ್ರೀಲತಾ ಹಾಗೂ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು. ರಾಧಾಕೃಷ್ಣ ಸ್ವಾಗತಿಸಿ, ಜಗದೀಶ್ ವಂದಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

 

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page