September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಮದಪದವು ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ತರಗತಿ ಪ್ರಾರಂಭ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಳ ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಟ್ಯೂಷನ್ ತರಗತಿಯನ್ನು ಆರಂಭಿಸಲಾಯಿತು.

ಜನಜಗೃತಿ ವೇದಿಕೆ ಸದಸ್ಯರಾದ ನವೀನ್ ಚಂದ್ರಶೆಟ್ಟಿ ಯವರು ತರಗತಿಯನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳು ರಾಜ್ಯದ್ಯಾನಂತ ಉತ್ತಮವಾಗಿ ನಡೆಯುತ್ತಿದೆ. ಅದರಲ್ಲೂ ಮಕ್ಕಳ ಶಿಕ್ಷಕನಕ್ಕಾಗಿ ಹಲವಾರು ಕಾರ್ಯಕ್ರಮಗಳಿದ್ದು ಮಕ್ಕಳ ಮುಂದಿನ ಭವಿಷ್ಯ ಕ್ಕೆ ಎಸ್.ಎಸ್.ಎಲ್.ಸಿ. ಅಂಕ ಮುಖ್ಯವಾಗಿರುತದೆ ಅದಕ್ಕೋಸ್ಕರ ಉಚಿತವಾಗಿ ಟ್ಯೂಷನ್ ತರಗತಿಗಳನ್ನು ಪ್ರಾರಂಭಿಸಲಾಗಿದೆ ಇದರ ಸದುಪಯೋಗವನ್ನು ಮಕ್ಕಳು ಪಡೆದು ಕೊಂಡು ಬರುವ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಆಗಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾoಶುಪಾಲ ಬಾಲಕೃಷ್ಣ ಎಲ್., ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟ ಅಧ್ಯಕ್ಷ ಅನಿತ ಪ್ರಭು, ಜ್ಞಾನವಿಕಾಸ ಸಂಯೋಜಕಿ ಗುಣವತಿ, ವಲಯ ಮೇಲ್ವಿಚಾರಕಿ ಸವಿತಾ, ಸೇವಾಪ್ರತಿನಿಧಿ ಮೋಹನ್ ದಾಸ್ ಭಾರತಿ, ಶಿಕ್ಷಕರಾದ ಸುಧಾಕರ್, ಅಮೃತ, ಮಮತಾ, ಶಾಂತಲಾ, ಶ್ರೀಲತಾ ಹಾಗೂ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು. ರಾಧಾಕೃಷ್ಣ ಸ್ವಾಗತಿಸಿ, ಜಗದೀಶ್ ವಂದಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

 

You may also like

News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ
News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.

You cannot copy content of this page