May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆರಾಜೆ  ಶ್ರೀವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಂಕಲ್ಪ

ಬಂಟ್ವಾಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನ  ಪೆರಾಜೆ ಇದರ ಜೀರ್ಣೋದ್ಧಾರ ಪ್ರಯುಕ್ತ ಪ್ರಶ್ನಾ ಚಿಂತನೆ ದೇವಸ್ಥಾನದಲ್ಲಿ ನವಂಬರ್ 11ರಂದು ಸೋಮವಾರ ಬೆಳಿಗ್ಗೆ ಸಿಂಹ ರಾಶಿ ಲಗ್ನದಲ್ಲಿ ನೆರವೇರಿತು. ದೇವಸ್ಥಾನವು  ಪೆರಾಜೆ, ಮಾಣಿ, ಅರೆಬೆಟ್ಟು, ಸೀಮಾ ಗ್ರಾಮಗಳಿಗೆ ಸಂಬಂಧಪಟ್ಟಿದೆ.

ಮಂಗಳೂರು ಬೆಂಗಳೂರು ಮತ್ತು ಮಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳ ಮಧ್ಯೆ ಇರುವ ದೇವಾಲಯ ಮಾಣಿ, ಬುಡೋಳಿ, ನೇರಳಕಟ್ಟೆಯಿಂದ ಸಮಾನ ದೂರದ ಸಾದಿಕುಕ್ಕು ಪರಿಸರದಲ್ಲಿದೆ. ಕೆದಿಲ, ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ, ವೀರಕಂಭ, ಅನಂತಾಡಿ, ನೆಟ್ಲ ಮುಡ್ನೂರು ಗ್ರಾಮಗಳ ಕೇಂದ್ರ ಸ್ಥಾನದಲ್ಲಿ ಈ ಪುರಾತನ ದೇವಾಲಯವಿದೆ.

ನೀಲೇಶ್ವರ ‌ಶ್ರೀ ಪದ್ಮನಾಭ ತಂತ್ರಿ ಉಚ್ಚಿಲ ಇವರ ಮಾರ್ಗದರ್ಶನದಲ್ಲಿ ಸಿ.ವಿ. ಪೊದುವಾಳ್ ಪಶ್ನಾ ಚಿಂತನೆಯನ್ನು ನಡೆಸಿಕೊಟ್ಟರು. ಪುದುಕೋಳಿ ಗೋವಿಂದ ಭಟ್ಟ್, ಸುಬ್ರಮಣ್ಯ ಭಟ್ ಮುಂಗೂರು ಸಹಕರಿಸಿದರು.  ಪುಷ್ಪರಾಜ ಚೌಟ ಮಾಣಿ ಇವರ ಯಜಮಾನತ್ವದಲ್ಲಿ ಶ್ರೀದೇವರಿಗೆ ಪ್ರಾರ್ಥನೆಯನ್ನು ನೆರವೇರಿಸಿ ಸಂಕಲ್ಪ ಮಾಡಲಾಯಿತು. ಬಳಿಕ ದೇವಸ್ಥಾನ ಪ್ರಾಕಾರ, ಶ್ರೀ ರಕ್ತೇಶ್ವರೀ ಸನ್ನಿಧಿ, ನಾಗ ಸನ್ನಿಧಿ ಹಾಗೂ ಜೀರ್ಣೋದ್ಧಾರದ ಬಗ್ಗೆ ರಾಶಿ ಫಲವನ್ನು ತಿಳಿದುಕೊಳ್ಳಲಾಯಿತು. ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ದೇವರ ಸಂಪೂರ್ಣ ಅನುಗ್ರಹ ಇದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಿದೆ.

ಪ್ರಮುಖರಾದ ರಾಜಾರಾಮ ಕಾಡೂರು ಇವರ ನೇತೃತ್ವದಲ್ಲಿ ನಡೆದ ಚಿಂತನಾ ಕೂಟದಲ್ಲಿ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಗಣ್ಯರಾದ ಸಂತೋಷ ಕುಮಾರ್ ಅರೆಬೆಟ್ಟು, ಚಂದ್ರಹಾಸ ಶೆಟ್ಟಿ ಬುಡೋಳಿ, ಕೆ.ಟಿ. ನಾಯ್ಕ, ಡಾ. ಶ್ರೀನಾಥ ಆಳ್ವ, ಸಚ್ಚಿದಾನಂದ ರೈ ಪಾಳ್ಯ, ಶ್ರೀನಿವಾಸ ಪೂಜಾರಿ, ಜನಾರ್ದನ ಪಾಳ್ಯ, ಕುಶಲ ಎಮ್. ಮಂಜೊಟ್ಟಿ, ದೇವದಾಸ, ದಿವಾಕರ ಶಾಂತಿಲ, ರಾಘವ ಏಣಾಜೆ, ಮಾಧವ ಪಾಳ್ಯ, ಪುರುಷೋತ್ತಮ ಮಡಲ, ನಾರಾಯಣ ಎಮ್.ಪಿ.,   ಸಂದೀಪ್ ಕುಮಾರ್ , ಲಕ್ಷ್ಮೀಶ, ಯತಿರಾಜ, ಜಯಾನಂದ ಪೆರಾಜೆ, ಶೇಖರ ಸಾದಿಕುಕ್ಕು,  ನಾಗೇಶ ಕೊಂಕಣಪದವು, ಹರೀಶ್ ರೈ ಪಾನೂರು, ಶ್ವೇತಾ ಕಾಡೂರು, ರತ್ನಾ ಮಂಜೊಟ್ಟಿ, ಪಿಡಿಒ ಶಂಭು ಕುಮಾರ ಶರ್ಮ ಮೊದಲಾದವರು ಉಪಸ್ಥಿತರಿದ್ದರು.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page