May 10, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಜಮಾಡಿ ಯುವವಾಹಿನಿ ಘಟಕ ತುಳು ವೆರೆ ತುಳಸಿ ಪರ್ಬ

ಯುವ ವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವಂಬರ್ 13ರಂದು ತುಳುವರೇ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ ಸುಖೀರ್ಥ ಆಚಾರ್ಯ, ಉಡುಪಿಯ ಯುವ ನ್ಯಾಯವಾದಿ ಹಂಜತ್ ಹೆಜಮಾಡಿ ಕೋಡಿ, ಮುಲ್ಕಿಯ ಉನ್ನತಿ ಕ್ರಿಶ್ಚಿಯನ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರೋಷನ್ ವಿಜಯ ಫುರ್ಟಾಡೊ, ಯುವ ವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿವೇಕ್ ಬಿ. ಮುಂತಾದವರು ಆಗಮಿಸಿದರು.

ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಥಮೇಶ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ ಸ್ವಾಗತಿಸಿದರು.  ಯುವವಾಹಿನಿ ಹೆಜಮಾಡಿ ಘಟಕದ ಸ್ಥಾಪಕ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಪ್ರಸ್ತಾವನೆ ಗೈದರು. ಪ್ರಾಪ್ತಿಯವರು ವಂದಿಸಿದರು. ಮನೋಹರ ಹೆಜಮಾಡಿ ಮತ್ತು ಧೀರಜ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.

ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾಮನ ಕೋಟ್ಯಾನ್ ನಡಿಕುದ್ರು ಇವರನ್ನು ಗೌರವಿಸಲಾಯಿತು.

You may also like

News

ನಾಳೆ ಮೇ 11ರಂದು ಕಥೊಲಿಕ್ ಸಭಾ ಕೇಂದ್ರೀಯ ವಾರ್ಷಿಕ ಚುನಾವಣೆ

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಪ್ರಕಟನೆ   ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಅವಧಿಗೆ
News

ನೂತನ ಕ್ರಿಶ್ಚಿಯನ್ ಜಗದ್ಗುರು ಪೋಪ್ ಲಿಯೋ 14 ರವರಿಗೆ ಕ್ರತಜ್ಞತಾರ್ಪಣೆ ಹಾಗೂ ಭಾರತೀಯ ಸೇನಾಪಡೆಯ ಸೈನಿಕರಿಗಾಗಿ ಪ್ರಾರ್ಥಿಸಲು ಮಂಗಳೂರು ಬಿಷಪ್ ಕರೆ

ನಾಳೆ ಮೇ 11ರಂದು ಮಂಗಳೂರು ಧರ್ಮಕ್ಷೇತ್ರದ ಎಲ್ಲಾ ಧರ್ಮಕೇಂದ್ರಗಳಲ್ಲಿ ಪೂಜೆಯ ಬಳಿಕ ಪರಮ ಪ್ರಸಾದದ ಆರಾಧನಾ ಪ್ರಾರ್ಥನೆ ಜಾಗತಿಕ ಕ್ಯಾಥೊಲಿಕ್ ಧರ್ಮಸಭೆಗೆ ನವೀಕೃತ ಭರವಸೆಯಾಗಿ ಪೋಪ್ ಲಿಯೋ

You cannot copy content of this page