August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಜಮಾಡಿ ಯುವವಾಹಿನಿ ಘಟಕ ತುಳು ವೆರೆ ತುಳಸಿ ಪರ್ಬ

ಯುವ ವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವಂಬರ್ 13ರಂದು ತುಳುವರೇ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ ಸುಖೀರ್ಥ ಆಚಾರ್ಯ, ಉಡುಪಿಯ ಯುವ ನ್ಯಾಯವಾದಿ ಹಂಜತ್ ಹೆಜಮಾಡಿ ಕೋಡಿ, ಮುಲ್ಕಿಯ ಉನ್ನತಿ ಕ್ರಿಶ್ಚಿಯನ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರೋಷನ್ ವಿಜಯ ಫುರ್ಟಾಡೊ, ಯುವ ವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿವೇಕ್ ಬಿ. ಮುಂತಾದವರು ಆಗಮಿಸಿದರು.

ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಥಮೇಶ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ ಸ್ವಾಗತಿಸಿದರು.  ಯುವವಾಹಿನಿ ಹೆಜಮಾಡಿ ಘಟಕದ ಸ್ಥಾಪಕ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಪ್ರಸ್ತಾವನೆ ಗೈದರು. ಪ್ರಾಪ್ತಿಯವರು ವಂದಿಸಿದರು. ಮನೋಹರ ಹೆಜಮಾಡಿ ಮತ್ತು ಧೀರಜ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.

ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾಮನ ಕೋಟ್ಯಾನ್ ನಡಿಕುದ್ರು ಇವರನ್ನು ಗೌರವಿಸಲಾಯಿತು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page