May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತಬೈಲ್ : ಮುಹಿಯ್ಯುದ್ದೀನ್ ಮದರಸ ಮೆನೇಜ್ಮೆಂಟ್ ಕಮಿಟಿಗೆ ಪದಾದಿಕಾರಿಗಳ ಆಯ್ಕೆ.

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ ಇದರ ಅದೀನದ ಮುಹಿಯ್ಯುದ್ದೀನ್ ಮದರಸ ಅಭಿವೃದ್ಧಿ ಸಮಿತಿ ರಚನಾ ಸಭೆಯು ಮಿತ್ತಬೈಲ್ ಮಸೀದಿ ಕಮಿಟಿ ಕಛೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಿತ್ತಬೈಲ್ ಜಮಾತ್ ಅಧ್ಯಕ್ಷ ಅದ್ದೇಡಿ ಮುಹಮ್ಮದ್ ಮಾತನಾಡಿ, ಮದರಸವನ್ನು ಆದುನಿಕ ತಂತ್ರ ಜ್ಞಾನದೊಂದಿಗೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್, ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ, ಪೋಷಕರ ಹಾಗೂ ಮದರಸ ಅಧ್ಯಾಪಕರಿಗೆ ತರಬೇತಿ ಕಾರ್ಯಕ್ರಮ, ಮದರಸ ಶಿಕ್ಷಣದೊಂದಿಗೆ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ, ಮಕ್ಕಳಲ್ಲಿ ಸಣ್ಣ ಪ್ರಾಯದಲ್ಲೇ ನಾಯಕತ್ವ ಗುಣವನ್ನು ಅಳವಡಿಸಲು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕಾರ್ಯಕ್ರಮ, ಹದಿಹರೆಯದ ಸಮಸ್ಯೆ ನಿವಾರಣೆಗೆ ಆಪ್ತ ಸಮಾಲೋಚನೆ ನೀಡುವ ವಿನೂತನ ಪ್ರಯತ್ನದ ಭಾಗವಾಗಿ ಮದರಸ ಅಭಿವೃದ್ಧಿ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ಮದರಸ ಅಭಿವೃದ್ಧಿ ಕಮಿಟಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಜಮಾತ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ನೆರವೇರಿಸಿದರು. ಅಧ್ಯಕ್ಷರಾಗಿ ಮುಹಮ್ಮದ್ ಅದ್ದೇಡಿ, ಉಪಾಧ್ಯಕ್ಷರುಗಳಾಗಿ ರಝಕ್ ಕಬಕ, ಪಿ.ಎಸ್. ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಆದಂ ಪಲ್ಲ, ಕಾರ್ಯದರ್ಶಿಯಾಗಿ ಎಸ್.ಎ.ಎಲ್. ಶರೀಫ್, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್,  ಅಸಿರ್ ಕೂಲ್, ಸಂಘಟನಾ ಕಾರ್ಯದರ್ಶಿಗಳಾಗಿ ಅಶ್ರಫ್ ಪೊನ್ನೋಡಿ, ಶಾಕಿರ್ ಶಾಂತಿಅಂಗಡಿ ಅವರನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಿತ್ತಬೈಲ್ ಜಮಾಅತ್ ಉಪಾಧ್ಯಕ್ಷ ಜಮಾಲ್, ಕೋಶಾಧಿಕಾರಿ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಅಶ್ರಫ್ ಶಾಂತಿ ಅಂಗಡಿ ಉಪಸ್ಥಿತರಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page