February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತಬೈಲ್ : ಮುಹಿಯ್ಯುದ್ದೀನ್ ಮದರಸ ಮೆನೇಜ್ಮೆಂಟ್ ಕಮಿಟಿಗೆ ಪದಾದಿಕಾರಿಗಳ ಆಯ್ಕೆ.

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ ಇದರ ಅದೀನದ ಮುಹಿಯ್ಯುದ್ದೀನ್ ಮದರಸ ಅಭಿವೃದ್ಧಿ ಸಮಿತಿ ರಚನಾ ಸಭೆಯು ಮಿತ್ತಬೈಲ್ ಮಸೀದಿ ಕಮಿಟಿ ಕಛೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಿತ್ತಬೈಲ್ ಜಮಾತ್ ಅಧ್ಯಕ್ಷ ಅದ್ದೇಡಿ ಮುಹಮ್ಮದ್ ಮಾತನಾಡಿ, ಮದರಸವನ್ನು ಆದುನಿಕ ತಂತ್ರ ಜ್ಞಾನದೊಂದಿಗೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್, ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ, ಪೋಷಕರ ಹಾಗೂ ಮದರಸ ಅಧ್ಯಾಪಕರಿಗೆ ತರಬೇತಿ ಕಾರ್ಯಕ್ರಮ, ಮದರಸ ಶಿಕ್ಷಣದೊಂದಿಗೆ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ, ಮಕ್ಕಳಲ್ಲಿ ಸಣ್ಣ ಪ್ರಾಯದಲ್ಲೇ ನಾಯಕತ್ವ ಗುಣವನ್ನು ಅಳವಡಿಸಲು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕಾರ್ಯಕ್ರಮ, ಹದಿಹರೆಯದ ಸಮಸ್ಯೆ ನಿವಾರಣೆಗೆ ಆಪ್ತ ಸಮಾಲೋಚನೆ ನೀಡುವ ವಿನೂತನ ಪ್ರಯತ್ನದ ಭಾಗವಾಗಿ ಮದರಸ ಅಭಿವೃದ್ಧಿ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ಮದರಸ ಅಭಿವೃದ್ಧಿ ಕಮಿಟಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಜಮಾತ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ನೆರವೇರಿಸಿದರು. ಅಧ್ಯಕ್ಷರಾಗಿ ಮುಹಮ್ಮದ್ ಅದ್ದೇಡಿ, ಉಪಾಧ್ಯಕ್ಷರುಗಳಾಗಿ ರಝಕ್ ಕಬಕ, ಪಿ.ಎಸ್. ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಆದಂ ಪಲ್ಲ, ಕಾರ್ಯದರ್ಶಿಯಾಗಿ ಎಸ್.ಎ.ಎಲ್. ಶರೀಫ್, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್,  ಅಸಿರ್ ಕೂಲ್, ಸಂಘಟನಾ ಕಾರ್ಯದರ್ಶಿಗಳಾಗಿ ಅಶ್ರಫ್ ಪೊನ್ನೋಡಿ, ಶಾಕಿರ್ ಶಾಂತಿಅಂಗಡಿ ಅವರನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಿತ್ತಬೈಲ್ ಜಮಾಅತ್ ಉಪಾಧ್ಯಕ್ಷ ಜಮಾಲ್, ಕೋಶಾಧಿಕಾರಿ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಅಶ್ರಫ್ ಶಾಂತಿ ಅಂಗಡಿ ಉಪಸ್ಥಿತರಿದ್ದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page