January 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ಉದ್ಘಾಟನೆ

ಬಂಟ್ವಾಳ : ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದ ಅವರು ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದರು.

ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿದರು. ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ಎಂ.ಆರ್.ಪಿ.ಎಲ್. ನ ವಿಕ್ರಮ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ, ಲತೀಶ್,  ದೇವಿಕಾ, ಉಷಾ, ಸುಂದರ ಸಾಲಿಯಾನ್, ಮಮತಾ, ಮೋಹನ್ ಪ್ರಭು, ಸುರೇಖಾ, ಸುಜಾತ, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.

You may also like

News

ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಗೆ ಸಾರ್ವಜನಿಕರಿಂದ ಭಾರೀ ವಿರೋಧ ಮತ್ತು ಆಕ್ರೋಶ

ಯೋಜನೆ ನಿಲ್ಲಿಸದಿದ್ದಲ್ಲಿ ರೈತರಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಮಂಗಳೂರು: ಪ್ರಸ್ತಾವಿತ ಉಡುಪಿ- ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಯೋಜನೆ ವಿರೋಧಿಸಿ, ಜನವರಿ
News

Saint Philomena Autonomous College NSS Unit Bags Taluk-Level Best NSS Unit Award

Puttur : The National Service Scheme (NSS) Unit of Saint Philomena Autonomous College, Puttur, has been honoured with the prestigious

You cannot copy content of this page