May 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ಉದ್ಘಾಟನೆ

ಬಂಟ್ವಾಳ : ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದ ಅವರು ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದರು.

ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿದರು. ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ಎಂ.ಆರ್.ಪಿ.ಎಲ್. ನ ವಿಕ್ರಮ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ, ಲತೀಶ್,  ದೇವಿಕಾ, ಉಷಾ, ಸುಂದರ ಸಾಲಿಯಾನ್, ಮಮತಾ, ಮೋಹನ್ ಪ್ರಭು, ಸುರೇಖಾ, ಸುಜಾತ, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.

You may also like

News

ಮೊಗರ್ನಾಡ್ ಚರ್ಚ್ ನಲ್ಲಿ ಪ್ರಥಮ ಪರಮ ಪ್ರಸಾದದ ಸಂಭ್ರಮ

ದೇವಮಾತೆಗೆ ಸಮರ್ಪಿಸಿದ ಮೊಗರ್ನಾಡ್ ಧರ್ಮಕೇಂದ್ರದವು 250ನೇ ಜ್ಯುಬಿಲಿ ಆಚರಿಸುವ ಸಂದರ್ಭದಲ್ಲಿ ಮೇ 11ರಂದು ಆದಿತ್ಯವಾರ ದೇವಾಲಯದ ವ್ಯಾಪ್ತಿಗೆ ಒಳಪಟ್ಟ 26 ಪುಟ್ಟ ಮಕ್ಕಳು ತಮ್ಮ ಜೀವಿತದಲ್ಲಿ ಮೊದಲ
News

ಮಹಿಳೆಗೆ ಗುಪ್ತಾಂಗವನ್ನು ತೋರಿಸಿ ವಿಕೃತವಾಗಿ ವರ್ತಿಸಿದ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲದ ಇಕ್ಕಿದು ಗ್ರಾಮದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂಬಾತನು, ಮಹಿಳೆ ಒಬ್ಬರ ಮನೆಗೆ ಹೋಗುವ ಕೊಪ್ಪಳ ಎಂಬಲ್ಲಿಯ ಸಂಪರ್ಕ ರಸ್ತೆಗೆ, ಗೇಟ್ ಹಾಕಿ ಬೀಗ ಜಡಿದು

You cannot copy content of this page