May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಸೈಂಟ್ ಆಗ್ನೆಸ್ ಸಿಬಿಎಸ್ಇ ಶಾಲೆಯಲ್ಲಿ ‘ಆಗ್ನೇವಾ 2K24’

ಮಂಗಳೂರು : ಸೈಂಟ್ ಆಗ್ನೆಸ್ ಸಿಬಿಎಸ್ಇ ಶಾಲೆಯ 60ನೇ ವರ್ಷದ ವಜ್ರ ಮಹೋತ್ಸವದ ಅಂಗವಾಗಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ‘ಆಗ್ನೇವಾ 2k24’ ಪ್ರಕೃತಿ ವಿಷಯಾಧರಿತ ಚರ್ಚೆ, ಮುಖ ಚಿತ್ರಕಲೆ, ವೈವಿಧ್ಯಮಯ ಕಾರ್ಯಕ್ರಮ ಸ್ಪರ್ಧೆಗಳಂತಹ ಅಂತರ್ ಶಾಲಾ ಸ್ಪರ್ಧೆಗಳನ್ನು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕರ್ನಾಟಕ ಪ್ರಾಂತೀಯ ಸಹಾಯಕ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿರುವ ವಂದನೀಯ ಭಗಿನಿ ರೋಸ್ ಆಗ್ನೆಸ್ ಇವರು ಅಧ್ಯಕ್ಷರಾಗಿ ಹಾಗೂ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ವಾಲ್ಟರ್ ಡಿಸೋಜ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಕಾರ್ಯಕ್ರಮ ನಿರೂಪಕರಾಗಿರುವ ವಿ.ಜೆ. ಡಿಕ್ಸನ್, ಭಗಿನಿ ಮರಿಯ ಗ್ಲೋರಿಯಾ, ಪ್ರಾಂಶುಪಾಲರಾದ ಭಗಿನಿ ಮರಿಯ ಸಾರಿಕಾ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಲಿಸ್ಟನ್ ಡಿಸೋಜ, ಕಾರ್ಯಕ್ರಮ ಸಂಯೋಜಕಿ ಶಿಕ್ಷಕಿ ಜೋಸ್ಪಿನ್ ಉಪಸ್ಥಿತರಿದ್ದರು. ‘ಆಗ್ನೇವಾ 2k24 ‘ ಉದ್ಘಾಟನಾ ಸಮಾರಂಭವು, ಪ್ರಕೃತಿ ಹಾಗೂ ರಕ್ಷಣಾ ಕ್ರಮ ವಿಷಯಾಧರಿತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಳಗೊಂಡಿತ್ತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲೆಯ ಜಂಟಿ ಕಾರ್ಯದರ್ಶಿಯಾಗಿರುವ ಅತೀ ವಂದನೀಯ ಭಗಿನಿ ಡಾ. ಮರಿಯ ರೂಪ, ಉದ್ಯಮಿ ಶಶಿಧರ್ ಡಾರ್ಲ, ಎಕೊಲೆಟ್ಸ್ ಅಕಾಡೆಮಿಯ ಸ್ಥಾಪಕ ಹಾಗೂ ನಿರ್ದೇಶಕ ಪ್ರಸಾದ್ ಅಡಪ್ಪರವರು ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ನೆರವೇರಿಸಿದರು.

 

ಸ್ಪರ್ಧೆಗೆ ಆಗಮಿಸಿದ 26 ಶಾಲೆಗಳಲ್ಲಿ ಮಂಗಳೂರಿನ ಮೌಂಟ್ ಕಾರ್ಮೆಲ್ ಶಾಲೆಯು ಪ್ರಥಮ ಬಹುಮಾನ ಪಡೆದುಕೊಂಡರೆ, ಶಾರದಾ ವಿದ್ಯಾಲಯವು ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಉತ್ತಮ ನಿರೂಪಣೆಗಾಗಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಲೇಡಿಹಿಲ್ ಶಾಲೆಯು ಪ್ರಥಮ ಹಾಗೂ ಸೈಂಟ್ ಮೇರಿಸ್ ಶಾಲೆಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಹೆತ್ತವರು ಪಾಲ್ಗೊಂಡಿದ್ದರು.

 

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page