February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈ ವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು.

 

ಶಿಫಾರಸಿನಲ್ಲಿ ಸಾಧಕರ ಹೆಸರು, ಫೋಟೋ, ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮಾಹಿತಿಗಳಿರಬೇಕು. ಶಿಫಾರಸು ಪತ್ರದೊಂದಿಗೆ ಸಾಧಕರ ಸಾಧನೆಯ ಬಗ್ಗೆ 200 ಶಬ್ದಗಳಿಗೆ ಮೀರದಂತೆ ಪರಿಚಯ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ 2024ರ ನವೆಂಬರ್ 30ರೊಳಗಾಗಿ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಈ ವಿಳಾಸಕ್ಕೆ ಕಳುಹಿಸಬೇಕು. ಒಬ್ಬರಿಗೆ ಇಬ್ಬರು ಸಾಧಕರನ್ನು ಶಿಫಾರಸು ಮಾಡುವ ಅವಕಾಶ ಇದೆ. ತಜ್ಞರ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಪ್ರೆಸ್ ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page