May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಟಿ.ಕೆ. ರಶೀದ್ ಪರ್ಲೊಟ್ಟು ಆಯ್ಕೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ  ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಇದರ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಪಿ.ಕೆ. ರಶೀದ್ ಪರ್ಲೊಟ್ಟು ಆಯ್ಕೆಯಾದರು.

ನವಂಬರ್ 20ರಂದು ಬುಧವಾರ ಶಾಲಾ ಉರ್ದಿಲಗುತ್ತು ಕೆ. ಇಂದುಹಾಸ ರೈ ಸಭಾಂಗಣದಲ್ಲಿ ನಡೆದ ಎಸ್.ಡಿ.ಎಂ.ಸಿ. ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಕೆ. ಶ್ರೀಧರ ರೈ ಸಭೆಯನ್ನು ಉದ್ಘಾಟಿಸಿದರು. ಸದಸ್ಯರಾದ ಲತೀಫ್ ನೇರಳಕಟ್ಟೆ, ಪ್ರೇಮಾ ಮತ್ತು ಲಕ್ಷ್ಮೀ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ಪಿ.ಕೆ. ರಶೀದ್ ಪರ್ಲೊಟ್ಟು, ಉಪಾಧ್ಯಕ್ಷರಾಗಿ ಶಶಿಕಲಾ, ಸದಸ್ಯರುಗಳಾಗಿ ಕೆ. ನಿರಂಜನ್ ರೈ, ಅಬೂಬಕ್ಕರ್ ಎನ್.ಕೆ., ಅತಾವುಲ್ಲಾ ನೇರಳಕಟ್ಟೆ, ಸಾಹುಲ್ ಹಮೀದ್ ಪರ್ಲೊಟ್ಟು, ಚಂದ್ರಶೇಖರ ಪೆರಾಜೆ, ರಶೀದ್ ಪಂತಡ್ಕ, ಮಸೂದ್ ಹಾಜಿ ಕೊಡಾಜೆ, ವೇದಾವತಿ, ಲತಾ, ಸೌಮ್ಯ, ಭಾರತಿ, ಮುನೀರಾ, ಆಯಿಷಾ, ನಝ್ರೀನಾ, ಸಕೀನಾ, ಹಾಗೂ ಅಪ್ಸಾ ಆಯ್ಕೆಯಾದರು.

ಶಾಲಾ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿ, ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಹ ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page