March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಟಿ.ಕೆ. ರಶೀದ್ ಪರ್ಲೊಟ್ಟು ಆಯ್ಕೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ  ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಇದರ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಪಿ.ಕೆ. ರಶೀದ್ ಪರ್ಲೊಟ್ಟು ಆಯ್ಕೆಯಾದರು.

ನವಂಬರ್ 20ರಂದು ಬುಧವಾರ ಶಾಲಾ ಉರ್ದಿಲಗುತ್ತು ಕೆ. ಇಂದುಹಾಸ ರೈ ಸಭಾಂಗಣದಲ್ಲಿ ನಡೆದ ಎಸ್.ಡಿ.ಎಂ.ಸಿ. ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಕೆ. ಶ್ರೀಧರ ರೈ ಸಭೆಯನ್ನು ಉದ್ಘಾಟಿಸಿದರು. ಸದಸ್ಯರಾದ ಲತೀಫ್ ನೇರಳಕಟ್ಟೆ, ಪ್ರೇಮಾ ಮತ್ತು ಲಕ್ಷ್ಮೀ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ಪಿ.ಕೆ. ರಶೀದ್ ಪರ್ಲೊಟ್ಟು, ಉಪಾಧ್ಯಕ್ಷರಾಗಿ ಶಶಿಕಲಾ, ಸದಸ್ಯರುಗಳಾಗಿ ಕೆ. ನಿರಂಜನ್ ರೈ, ಅಬೂಬಕ್ಕರ್ ಎನ್.ಕೆ., ಅತಾವುಲ್ಲಾ ನೇರಳಕಟ್ಟೆ, ಸಾಹುಲ್ ಹಮೀದ್ ಪರ್ಲೊಟ್ಟು, ಚಂದ್ರಶೇಖರ ಪೆರಾಜೆ, ರಶೀದ್ ಪಂತಡ್ಕ, ಮಸೂದ್ ಹಾಜಿ ಕೊಡಾಜೆ, ವೇದಾವತಿ, ಲತಾ, ಸೌಮ್ಯ, ಭಾರತಿ, ಮುನೀರಾ, ಆಯಿಷಾ, ನಝ್ರೀನಾ, ಸಕೀನಾ, ಹಾಗೂ ಅಪ್ಸಾ ಆಯ್ಕೆಯಾದರು.

ಶಾಲಾ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿ, ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಹ ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page