January 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ

ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು  ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ನವಂಬರ್ 21ರಂದು ಗುರುವಾರ ನಡೆಯಿತು.


ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು, ಖಜಾಂಜಿ ಪುಷ್ಪರಾಜ್ ಬಿ.ಎನ್., ಯಶೋಧರ ಕೋಟ್ಯಾನ್, ಹರೀಶ್ ಮೋಟುಕಾನ ನುಡಿ ನಮನ ಸಲ್ಲಿಸಿದರು. ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಹರೀಶ್ ಕುಲ್ಕುಂದ,  ಶಂಶೀರ್ ಬುಡೋಳಿ ಮುಂತಾದವರು ಉಪಸ್ಥಿತರಿದ್ದರು.

You may also like

News

ಸಂದೇಶ ಪ್ರತಿಷ್ಠಾನ 2025 ರ ಸಂದೇಶ ಪ್ರಶಸ್ತಿಗಳ ಪ್ರಕಟಣೆ

ಮಂಗಳೂರು : ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ®ವು ಮೌಲ್ಯಾಧಾರಿತ ಸಮಾಜವನ್ನು ಪೋಷಿಸುವ ದೃಢವಾದ ಬದ್ಧತೆಯಿಂದ ಹುಟ್ಟಿಕೊಂಡ ಸಂಸ್ಥೆ. 1989ರಲ್ಲಿ ಸ್ಥಾಪಿಸಲಾದ ಈ ಸಂಸ್ಥೆಯು 1991 ರಲ್ಲಿ
News

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಜೇಶ್ವರ, ಕಾಸರಗೋಡು, ಹೊಸದುರ್ಗ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ 2001ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ

You cannot copy content of this page