May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 21ನೇ ಮಾಲಿಕೆ

ನಾರಾಯಣಗುರುಗಳ ಜನಪರ ಕಾಳಜಿ ಯುವಕರಿಗೆ ಸ್ಪೂರ್ತಿ – ಪ್ರಜಿತ್ ಅಮೀನ್

ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ. ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು ತಲಶ್ಯೇರಿಯದಲ್ಲಿ ಗುರುಗಳು ಜೀವಂತವಿರುವಾಗಲೆ ಅವರ ಶಿಷ್ಯರು ಪ್ರತಿಷ್ಟಾಪಿಸಿದ ಪಂಚಲೋಹದ ಮೂರ್ತಿಯನ್ನು ನೋಡಿ ಗುರುಗಳು ಅಭಿಪ್ರಾಯ ಪಟ್ಟರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ತಿಳಿಸಿದರು.

ಅವರು ನವಂಬರ್ 21ರಂದು ಗುರುವಾರ  ಬಂಟ್ಟಾಳ ತಾಲೂಕಿನ ವಗ್ಗ ನಿವೇದಿತಾ ಜಗದೀಶ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 21ರಲ್ಲಿ ಗುರುಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಧನುಷ್ ಮಧ್ವ, ಮಧುಸೂದನ್ ಮಧ್ವ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕೆ., ಅರುಣ್ ಕುಮಾರ್, ಸದಸ್ಯರಾದ ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಸುದೀಪ್ ರಾಯಿ, ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಳಿಕೆ ಮತ್ತಿತರರು ಉಪಸ್ಥಿತರಿದ್ದರು.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page