September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 21ನೇ ಮಾಲಿಕೆ

ನಾರಾಯಣಗುರುಗಳ ಜನಪರ ಕಾಳಜಿ ಯುವಕರಿಗೆ ಸ್ಪೂರ್ತಿ – ಪ್ರಜಿತ್ ಅಮೀನ್

ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ. ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು ತಲಶ್ಯೇರಿಯದಲ್ಲಿ ಗುರುಗಳು ಜೀವಂತವಿರುವಾಗಲೆ ಅವರ ಶಿಷ್ಯರು ಪ್ರತಿಷ್ಟಾಪಿಸಿದ ಪಂಚಲೋಹದ ಮೂರ್ತಿಯನ್ನು ನೋಡಿ ಗುರುಗಳು ಅಭಿಪ್ರಾಯ ಪಟ್ಟರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ತಿಳಿಸಿದರು.

ಅವರು ನವಂಬರ್ 21ರಂದು ಗುರುವಾರ  ಬಂಟ್ಟಾಳ ತಾಲೂಕಿನ ವಗ್ಗ ನಿವೇದಿತಾ ಜಗದೀಶ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 21ರಲ್ಲಿ ಗುರುಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಧನುಷ್ ಮಧ್ವ, ಮಧುಸೂದನ್ ಮಧ್ವ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕೆ., ಅರುಣ್ ಕುಮಾರ್, ಸದಸ್ಯರಾದ ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಸುದೀಪ್ ರಾಯಿ, ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಳಿಕೆ ಮತ್ತಿತರರು ಉಪಸ್ಥಿತರಿದ್ದರು.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page