August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು – ಗಾಯತ್ರಿ ಆರ್. ಕಂಬಳಿ

ಬಂಟ್ವಾಳ : ನಮ್ಮತನವನ್ನು ನಾವು ಬೆಳೆಸಿಕೊಳ್ಳುವುದರೊಂದಿಗೆ ಧಾರ್ಮಿಕ ಆಚರಣೆ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಅವಶ್ಯಕತೆ ಇದೆ ಎಂದು ಬಂಟ್ವಾಳ ನಿವೃತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಆರ್. ಕಂಬಳಿ ಹೇಳಿದರು.

 ಅವರು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ವತಿಯಿಂದ ನವಂಬರ್ 23ರಂದು ಶನಿವಾರ ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಸನ್ಮತಿ ಭವನದಲ್ಲಿ ಜರಗಿದ 5ನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿ ಪ್ರತಿಯೊಬ್ಬ ಮಹಿಳೆಯಲ್ಲೂ ಒಂದೊಂದು ರೀತಿಯ ಕಲಾ ಶಕ್ತಿ ಅಡಗಿದೆ ಅದನ್ನು ಗುರುತಿಸುವ ಅವಶ್ಯಕತೆ ಇದೆ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿಯ ಅಧ್ಯಕ್ಷೆ ಮೀನಾಕ್ಷಿ ಆರ್. ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವ ಅದ್ಯಕ್ಷೆ ಡಾ. ಕಮಲ ಪ್ರಭಾಕರ ಭಟ್, ಜ್ಯೋತಿ ಮಹಿಳಾ ಮಂಡಳಿಯ ಅಧ್ಯಕ್ಷ ಲಕ್ಷ್ಮಿ ಪ್ರಭು, ಬಾಳ್ತಿಲ ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷೆ ಹಿರಣ್ಮಯಿ ಮೊದಲದವರು ಉಪಸ್ಥಿತರಿದ್ದರು. ಬಾಲಕೃಷ್ಣ ಭಟ್ ಪೌರೋಹಿತ್ಯದಲ್ಲಿ ಶ್ರೀ  ಶನೇಶ್ವರ ಪೂಜೆ ಜರಗಿತು.

ಕಾರ್ಯಕ್ರಮದಲ್ಲಿ ಪುತ್ತೂರು ವಿದ್ಯಾವರ್ಧಕದ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕಲ್ಲಡ್ಕ ಗೇರುಕಟ್ಟೆ, ಶ್ರೀ ಉಮಾ ಶಿವ ಕ್ಷೇತ್ರದ ಅಧ್ಯಕ್ಷರಾದ ಈಶ್ವರ ಭಟ್ ರಾಕೋಡಿ, ಶ್ರೀ ಶಾರದಾ ಪ್ರತಿಷ್ಠಾನ ಕಲ್ಲಡ್ಕದ ಅಧ್ಯಕ್ಷ ಯತಿನ್ ಕುಮಾರ್, ಕಾರ್ಯದರ್ಶಿ ವಜ್ರನಾಥ್ ಕಲ್ಲಡ್ಕ, ಶ್ರೀ ಶಾರದಾ ಪೂಜಾ ಸಮಿತಿಯ ಅಧ್ಯಕ್ಷ ಯೋಗೀಶ್  ಪೂಜಾರಿ, ಕಲ್ಲಡ್ಕ ರೈತರ ಸೇವಾ ಬ್ಯಾಂಕಿನ ನಿರ್ದೇಶಕರುಗಳಾದ ಲೋಕನಾಥ್ ಏಳ್ತೀಮಾರ್, ಜಯರಾಮ ರೈ ಕಲ್ಲಡ್ಕ, ಮೊದಲಾದವರು ಉಪಸ್ಥಿತರಿದ್ದರು.

 ವಿಜಯ ಪ್ರಕಾಶ್ ಪ್ರಾರ್ಥಿಸಿ, ಸಂಘದ ಕೋಶಾಧಿಕಾರಿ ಯಮುನಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ವಿದ್ಯಾ ಗುಣಾಕರ ವಂದಿಸಿದರು. ಲಖಿತಾ ಆರ್. ಶೆಟ್ಟಿ ಹಾಗೂ ರೇಣುಕಾ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page