August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸ್ – ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ

ಮಂಗಳೂರು ನವಂಬರ್ 24 :- ರಾಜ್ಯದ ಕೆಲವು ‘ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ನಡೆಸಿ ನುರಿತ ಇಂಜಿನಿಯರ್ ಗಳಿಂದ ವಿನ್ಯಾಸ ಪಡೆದು ಪಾಲಿಕೆಯಿಂದ ವಲಯ ನಿಯಮಾವಳಿ ಅನ್ವಯ ಕಟ್ಟಡ ಪರವಾನಿಗೆ ಪಡೆದು ವಿನ್ಯಾಸದಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿಕೊಂಡು ನಿಯಮಾನುಸಾರ ಕಟ್ಟಡವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ.

ಕಟ್ಟಡದ ಕಾಮಗಾರಿಯಲ್ಲಿ ಯಾವುದೇ ಲೋಪದೋಷವಾಗಿ ಕಟ್ಟಡಕ್ಕೆ ಯಾವುದೇ ಅಪಾಯವಾದಲ್ಲಿ ಅಥವಾ ಅನುಮೋದಿತ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿ ನಿರ್ಮಿಸಿ ಕಟ್ಟಡ ಕುಸಿದು ಯಾವುದೇ ಪ್ರಾಣಹಾನಿ ಸಂಭವಿಸಿದಲ್ಲಿ ಕಟ್ಟಡದ ಮಾಲೀಕರು, ಕಟ್ಟಡದ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.

 

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page