May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸ್ – ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ

ಮಂಗಳೂರು ನವಂಬರ್ 24 :- ರಾಜ್ಯದ ಕೆಲವು ‘ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ನಡೆಸಿ ನುರಿತ ಇಂಜಿನಿಯರ್ ಗಳಿಂದ ವಿನ್ಯಾಸ ಪಡೆದು ಪಾಲಿಕೆಯಿಂದ ವಲಯ ನಿಯಮಾವಳಿ ಅನ್ವಯ ಕಟ್ಟಡ ಪರವಾನಿಗೆ ಪಡೆದು ವಿನ್ಯಾಸದಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿಕೊಂಡು ನಿಯಮಾನುಸಾರ ಕಟ್ಟಡವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ.

ಕಟ್ಟಡದ ಕಾಮಗಾರಿಯಲ್ಲಿ ಯಾವುದೇ ಲೋಪದೋಷವಾಗಿ ಕಟ್ಟಡಕ್ಕೆ ಯಾವುದೇ ಅಪಾಯವಾದಲ್ಲಿ ಅಥವಾ ಅನುಮೋದಿತ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿ ನಿರ್ಮಿಸಿ ಕಟ್ಟಡ ಕುಸಿದು ಯಾವುದೇ ಪ್ರಾಣಹಾನಿ ಸಂಭವಿಸಿದಲ್ಲಿ ಕಟ್ಟಡದ ಮಾಲೀಕರು, ಕಟ್ಟಡದ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.

 

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page