August 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫಿಲೋ ಚಿತ್ತಾರ : ಕಲಾ ವೈಭವ

‘ಸಂತ ಫಿಲೋಮಿನಾ ಕಾಲೇಜು ನನ್ನ ವಿದ್ಯಾರ್ಥಿ ಬದುಕಿನಲ್ಲಿ ನೀಡಿದ ಪ್ರೋತ್ಸಾಹ ಮರೆಯುವಂತಿಲ್ಲ’ – ವಿದ್ವಾನ್ ವಿಶ್ವಾಸ್ ಕೃಷ್ಣ

ಪುತ್ತೂರು, ನವಂಬರ್ 25: ‘ಹೊಸತನ್ನು ಕಲಿಯಲು ಪ್ರೇರೇಪಿಸುವುದೇ ಕಲೆ. ಕಲೆ ನಿಮ್ಮ ತಾಳ್ಮೆಯನ್ನು ಬೆಳೆಸಿ ಆಸಕ್ತಿಯನ್ನು ಹೆಚ್ಚಿಸುತ್ತದೆ. ಬದುಕಿನಲ್ಲಿ ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಸಂತ ಫಿಲೋಮಿನಾ ಕಾಲೇಜು ನನ್ನ ವಿದ್ಯಾರ್ಥಿ ಬದುಕಿನಲ್ಲಿ ನೀಡಿದ ಪ್ರೋತ್ಸಾಹ ಮರೆಯುವಂತಿಲ್ಲ’ ಎಂದು ಮಂಗಳೂರಿನ ಕಲಾ ಶಾಲೆಯ ಸಂಸ್ಥಾಪಕ, ಖ್ಯಾತ ವಯೋಲಿನಿಸ್ಟ್ ವಿದ್ವಾನ್ ವಿಶ್ವಾಸ್ ಕೃಷ್ಣ ಅವರು ಹೇಳಿದರು. ಅವರು ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ‘ಫಿಲೋ ಚಿತ್ತಾರ: ಕಲಾ ದಿನ ಮತ್ತು ಕಲಾ ಪ್ರದರ್ಶನ’ವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕರಾದ ಅತೀ ವಂದನೀಯ ಫಾದರ್ ಲಾರೆನ್ಸ್ ಮಸ್ಕರೇನಸ್ ಅವರು ‘ಕಲೆ ಅಂತರಂಗದ ಭಾಷೆ. ಅದರಲ್ಲೊಂದು ಅಧ್ಯಾತ್ಮಿಕತೆಯಿದೆ. ಬದುಕಿಗೆ ಉತ್ಸಾಹ ಚೈತನ್ಯ ತುಂಬುವುದೇ ಕಲೆ. ಆ ಅಭಿರುಚಿ ನಮ್ಮೊಳಗೆ ಮೂಡಲಿ’ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆವರೆಂಡ್ ಡಾl ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ‘ಪ್ರತಿಯೊಬ್ಬರಲ್ಲೂ ಶಕ್ತಿಯಿದೆ ಮತ್ತು ಈ ಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ಪರಿಶ್ರಮವು ತ್ರಾಸದಾಯಕವಾಗಿದ್ದರೂ ಸಾಮರ್ಥ್ಯವನ್ನು ಅಭಿವ್ಯಕ್ತಿಸಿ ಸಮಾಜಕ್ಕೆ ಕೊಡುಗೆಯನ್ನು ನೀಡಿ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಶೇಷ ಆಕರ್ಷಣೆಯಾಗಿ ‘ಕಾವ್ಯ ಕುಂಚ ನೃತ್ಯ ಗಾಯನ’ ಕಾರ್ಯಕ್ರಮ ನಡೆಯಿತು. ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿದ ಸುಪ್ತ ಪ್ರತಿಭೆಯ ಪ್ರದರ್ಶನಕ್ಕೆ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಚಿತ್ರಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥ ಡಾ. ನೋರ್ಬರ್ಟ್ ಮಸ್ಕರೇನಸ್, ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕ ತೃತೀಯ ಬಿಸಿಎಯ ದಿಲೀಪ್, ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಶ್ರೀ ಜಯರಾಜ್ ಭಂಡಾರಿ, ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮಾಲಿನಿ ಕೆ., ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಲಿತ ಕಲಾ ಸಂಘದ ಸಹ ಸಂಯೋಜಕರಾದ ಸುರಕ್ಷಾ ರೈ, ಪೂಜಶ್ರೀ ರೈ ಮತ್ತು ಡಾ. ಮೈತ್ರಿ ಭಟ್ ಅವರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಯಕ್ಷಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಯಕ್ಷಕಲಾ ಕೇಂದ್ರದ ನಿರ್ದೇಶಕ ಶ್ರೀ ಪ್ರಶಾಂತ್ ರೈ ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ತನುಜಾ ವಂದಿಸಿ, ತೃತೀಯ ಬಿಎಸ್ಸಿಯ ಕುಮಾರಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಸ್ನೇಹ ಸದನದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಅಗತ್ಯ ವಸ್ತುಗಳ ವಿತರಣೆ

80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15ರಂದು ಕಾರವಾರದ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಉರ್ವಾ ಹಾಗೂ ವಾಲೆನ್ಸಿಯಾ ಶಾಖೆಗಳ ಜಂಟಿ ಆಶ್ರಯದಲ್ಲಿ ಗುರುಪುರ
News

ಸೆಪ್ಟೆಂಬರ್  8ಕ್ಕೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ರಜೆ ಘೋಷಿಸಲು ಮನವಿ

ಸಚಿವ ಯು.ಟಿ. ಖಾದರ್‌ ಅವರಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಹಾಗೂ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದ ನಿಯೋಗದಿಂದ ಭೇಟಿ ಕಥೊಲಿಕ್ ಕ್ರೈಸ್ತ ಸಮುದಾಯದಲ್ಲಿ ಪ್ರತೀ ವರ್ಷ ಸೆಪ್ಟೆಂಬರ್

You cannot copy content of this page