February 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆಯಲ್ಲಿ ವಿಮೆ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ನೋಂದಾವಣಿ ಶಿಬಿರ‌ ತುಂಬೆ ಬೊಳ್ಳಾರಿಯ ಸಂಘದ ಕಚೇರಿಯಲ್ಲಿ ನವಂಬರ್ 24ರಂದು ಭಾನುವಾರ ನಡೆಯಿತು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಶಿಬಿರ ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಬಳಿಕ ಮಾತನಾಡಿ ‘ಜನರ ಉಪಯೋಗಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಮಾಹಿತಿಯ ಕೊರತೆಯಿಂದ‌ ಅನೇಕ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ಸಿಗಲು ಸಾಧ್ಯವಿದೆ’ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ತುಂಬೆ ಗ್ರಾಮ ಪಂಚಾಯತಿ ಸದಸ್ಯ ಕಿಶೋರ್, ಮಹಿಳಾ ಸಂಘದ ಅಧ್ಯಕ್ಷೆ ಜಲಜಾಕ್ಷಿ, ಗೌರವಾಧ್ಯಕ್ಷೆ ಪಾರ್ವತಿ ಐತಪ್ಪ ಕುಲಾಲ್, ಅಧ್ಯಕ್ಷ‌ ಚೆನ್ನಕೇಶವ, ಗ್ರಾಮ 1 ವ್ಯವಸ್ಥಾಪಕ ರಂಜಿತ್, ಪಂಚಾಯತಿನ ಮಾಜಿ ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಸಂಘದ ಕಾರ್ಯದರ್ಶಿ ಪ್ರವೇಶ್ ಕುಮಾರ್ ಉಪಸ್ಥಿತರಿದ್ದರು. ಸಂಚಾಲಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ,
News

ಅಮೆರಿಕದಲ್ಲಿ ರಸ್ತೆ ಅಪಘಾತ

ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಭಾರಿ ಪರಿಹಾರ ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ 2023ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ

You cannot copy content of this page