February 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆಯಲ್ಲಿ ವಿಮೆ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ನೋಂದಾವಣಿ ಶಿಬಿರ‌ ತುಂಬೆ ಬೊಳ್ಳಾರಿಯ ಸಂಘದ ಕಚೇರಿಯಲ್ಲಿ ನವಂಬರ್ 24ರಂದು ಭಾನುವಾರ ನಡೆಯಿತು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಶಿಬಿರ ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಬಳಿಕ ಮಾತನಾಡಿ ‘ಜನರ ಉಪಯೋಗಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಮಾಹಿತಿಯ ಕೊರತೆಯಿಂದ‌ ಅನೇಕ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ಸಿಗಲು ಸಾಧ್ಯವಿದೆ’ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ತುಂಬೆ ಗ್ರಾಮ ಪಂಚಾಯತಿ ಸದಸ್ಯ ಕಿಶೋರ್, ಮಹಿಳಾ ಸಂಘದ ಅಧ್ಯಕ್ಷೆ ಜಲಜಾಕ್ಷಿ, ಗೌರವಾಧ್ಯಕ್ಷೆ ಪಾರ್ವತಿ ಐತಪ್ಪ ಕುಲಾಲ್, ಅಧ್ಯಕ್ಷ‌ ಚೆನ್ನಕೇಶವ, ಗ್ರಾಮ 1 ವ್ಯವಸ್ಥಾಪಕ ರಂಜಿತ್, ಪಂಚಾಯತಿನ ಮಾಜಿ ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಸಂಘದ ಕಾರ್ಯದರ್ಶಿ ಪ್ರವೇಶ್ ಕುಮಾರ್ ಉಪಸ್ಥಿತರಿದ್ದರು. ಸಂಚಾಲಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಜೆರಾರ್ಡ್ ಟವರ್ಸ್ ರವರ ಏಕಾಂಗಿ ಪ್ರತಿಭಟನೆಗೆ ಕಣ್ಣುಗಳನ್ನು ತೆರೆದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು

ಧರೆಗುರುಳಿಸಿದ ಕದ್ರಿ ಶಿವಭಾಗ್ ನಲ್ಲಿರುವ ಒಣ ಮರ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಗಿಟ್ಟಿಸಿಕೊಂಡ ಸಾಮಾಜಿಕ ಕಾರ್ಯಕರ್ತ ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶಿವಭಾಗ್ ಬಸ್
News

‘FOUNDER’S DAY’ was celebrated at Lourdes Central School Bejai Mangaluru

“The things you do for yourself are gone when you are gone, but the things you do for others, remain

You cannot copy content of this page