September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ

ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ. ಸಮಯವನ್ನು ಸರಿಯಾದ ಹವ್ಯಾಸದ ಮೂಲಕ ಬೆಳೆಸಿಕೊಂಡು ದೈಹಿಕವಾಗಿ ಉತ್ತಮ ಆರೋಗ್ಯವನ್ನು ಪಡೆಯಲು ಆಟೋಟಗಳು ಕ್ರೀಡಾಕೂಟಗಳು ದೈಹಿಕ ಚಟುವಟಿಕೆಗಳು ಉತ್ತಮವಾದ ಫಲಿತಾಂಶವನ್ನು ನೀಡುತ್ತದೆ ಎಂದು ಜನಶಕ್ತಿ ಸೇವಾ ಟ್ರಸ್ಟ್ ಕುದ್ರಬೆಟ್ಟು ಇದರ ಅಧ್ಯಕ್ಷ ಜಿನ್ನಪ್ಪ ಮಾಸ್ಟರ್ ಏಲ್ತಿಮಾರ್ ಹೇಳಿದರು.

ಅವರು  ಶ್ರೀ ಮಣಿಕಂಠ ಯುವಶಕ್ತಿ (ರಿ.) ಕುದ್ರೆಬೆಟ್ಟು, ಹಿರಿಯ ವಿದ್ಯಾರ್ಥಿ ಸಂಘ ಕುದ್ರೆಬೆಟ್ಟು ಜಂಟಿ ಆಶ್ರಯದಲ್ಲಿ ಕುದ್ರೆಬೆಟ್ಟು ಶ್ರೀ ಮಣಿಕಂಠ ಭಜನಾ ಮಂದಿರದ ವಠಾರದಲ್ಲಿ ಜರಗಿದ ಸ್ಥಳೀಯ  8 ತಂಡಗಳ  ಗ್ರೀಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಮಣಿಕಂಠ ಟ್ರೋಫಿ 2024ನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಇದರ ಅಧ್ಯಕ್ಷ ಲೋಕಾನಂದ ಏಲ್ತಿಮಾರ್,  ಜನಸತ್ತಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಧರ್ಮದ ಬಲ್ಲಿ,  ಶ್ರೀ ಮಣಿಕಂಠ ಯುವಶಕ್ತಿ ಇದರ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು, ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಕೇಶವ ಏಳ್ತೀಮರ್, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿವರಾಜ್, ಕಾರ್ಯದರ್ಶಿ ನೀತು ಅಮೀನ್,  ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಂದರ ಸಾಲಿಯಾನ್, ಟ್ರಸ್ಟಿಗಳಾದ ರವಿ ಸುವರ್ಣ ಬೈಲು, ಶಂಕರ ಕುದ್ರೆಬೆಟ್ಟು,  ಉದ್ಯಮಿ ಗಣೇಶ್ ಜನನಿ, ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಲ್ಪೊಡಿ , ಶೇಖರ ಶಾಲಿಯನ್, ಜನಾರ್ಧನ ಸಾಲಿಯಾನ್, ಅನ್ನು ಪೂಜಾರಿ ಏಳ್ತಿಮಾರ್, ಮಾಜಿ ಅಧ್ಯಕ್ಷರಾದ ಮಾದವ ಸಾಲಿಯಾನ, ಸನತ್ ಕುಮಾರ್, ಉಪಾಧ್ಯಕ್ಷ ಸತೀಶ್,  ತೀರ್ಪುಗಾರರಾದ ನಾಗೇಶ್ ಪೊನ್ನಡಿ, ಜಯಕರ ಕಾಂಚನ್, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಜನಸಂಪರ್ಕ ರಕ್ಷಣಾ ಜೀವವಿಮೆ ನೊಂದಾವಣೆ ಕ್ಯಾಂಪ್ ನಡೆದು 46 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು. ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ರಕ್ತೇಶ್ವರಿ ಸುಧೆಕಾರು, ದ್ವಿತೀಯ ಸ್ಥಾನವನ್ನು ಕುರ್ಮಾನ್ ಯಂಗ್ ಬಾಯ್ಸ್, ತೃತೀಯ ಸ್ಥಾನವನ್ನು ಕುದ್ರೆಬೆಟ್ಟು ಹಾಗೂ ನಾಲ್ಕನೇ ಸ್ಥಾನವನ್ನು ಗೋಳ್ತಮಜಲು ಪಡೆದುಕೊಂಡಿತು. ಜನಶಕ್ತಿ ಸೇವಾ ಟ್ರಸ್ಟ್ ಕೋಶಾಧಿಕಾರಿ ಭೋಜರಾಜ ಸ್ವಾಗತಿಸಿ, ಸಂತೋಷ್ ಕುಮಾರ್ ಬೊಲ್ಪೊಡಿ ವಂದಿಸಿದರು. ಯೋಗೇಶ್ ತೋಟ ಕಾರ್ಯಕ್ರಮ ನಿರೂಪಿಸಿದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page