February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠದ 8ನೇ ವಾರ್ಷಿಕೋತ್ಸವ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ, ಧರ್ಮಸ್ಥಳ ಇದರ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನವಂಬರ್ 25ರಂದು ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಹಂತ್ ವಿದ್ಯಾನಂದ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮೀ ಆನಂದ ಚೈತನ್ಯ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ರಾಮೇಶ್ವರಾನಂದ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಶಿವ ಪ್ರೇಮಾನಂದಪುರಿ ಮಹಾರಾಜ್, ಮಹಾಮಂಡಲೇಶ್ವರ್ 1008 ಶ್ರೀ ಸ್ವಾಮಿ ಲಲಿತಾನಂದ ಗಿರಿ ಮಹಾರಾಜ್, ಶ್ರೀ ಮಹಂತ್ ದೇವಾನಂದ ಸರಸ್ವತಿ ಮಹಾರಾಜ್, ಶ್ರೀ ಮಹಂತ್ ಇಂದ್ರಾನಂದ ಸರಸ್ವತಿ, ಮಹಂತ್ ಮಾಧವಾನಂದ ಸರಸ್ವತಿ, ಮಹಂತ್ ಜ್ಞಾನ ಪ್ರೇಮಾನಂದ ಪುರಿ ಮಹಾರಾಜ್, ಕರ್ನಾಟಕ ಸರಕಾರದ ಮೀನುಗಾರಿಕೆ ಸಚಿವ ಮಂಕಾಳ್ ಎಸ್. ವೈದ್ಯ, ಹರಿದ್ವಾರ ಶಾಸಕ ಮದನ್ ಕೌಶಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಕಾರ್ಪೋರೇಟ್ ಕಿರಣ್ ಕುಮಾರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ ಕಾಶಿಪಟ್ಣ, ಬೆಹರೈನ್ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್, ಭಟ್ಕಳದ ಕೃಷ್ಣ ನಾಯ್ಕ್, ಗೋವಿಂದ್ ನಾಯ್ಕ್, ಈಶ್ವರ ನಾಯ್ಕ್, ಗಣೇಶ್ ನೇತ್ರಾಣಿ, ಗಂಗಾಧರ್ ಬೆಂಗಳೂರು, ರಮೇಶ್ ಸಾಲಿಯನ್ ದೆಹಲಿ, ಜಿತೇಶ್ ಉಡುಪಿ, ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ ಮೊದಲಾದವರು ಹಾಜರಿದ್ದರು. ಬಳಿಕ ಸ್ವಾಮೀಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page