May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಮಂಜೂಷಾ” ವಸ್ತು ಸಂಗ್ರಹಾಲಯ – ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ಮಾನ್ಯತೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತು ಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ವಿಶೇಷ  ಮಾನ್ಯತೆಗೆ ಪಾತ್ರವಾಗಿದೆ.

ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೇ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

7500 ತಾಳೆಗರಿ ಹಸ್ತಪ್ರತಿಗಳು, 21,000 ಕಲಾತ್ಮಕ ವಸ್ತುಗಳು, 25,000 ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹದ ಬಗ್ಯೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page