March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ ಚುನಾವಣೆ ಬಂಟ್ವಾಳ ಪುರಸಭೆ ಹಾಗೂ ಗ್ರಾಮ ಪಂಚಾಯತ್ ನ 11 ಸ್ಥಾನಗಳ ಪೈಕಿ 9ರಲ್ಲಿ ಕಾಂಗ್ರೆಸ್ ಮೇಲುಗೈ

ಬಂಟ್ವಾಳ : ತಾಲೂಕಿನ ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನವಂಬರ್ 23ರಂದು ಮತದಾನ ನಡೆದಿದ್ದು, ಮಂಗಳವಾರ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌ ಮೇಲುಗೈ ಸಾಧಿಸಿ ಗೆಲುವಿನ ನಗೆ ಬೀರಿದರೆ, ಬಿಜೆಪಿ ಒಂದು ಸ್ಥಾನ ಕಳೆದುಕೊಂಡಿದ್ದು, ಎಸ್.ಡಿ.ಪಿ.ಐ. ಎಲ್ಲಾ ಸ್ಥಾನವನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿದೆ.

ಪುರಸಭೆಯ 2ನೇ ವಾರ್ಡ್ ನ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುರುಷೋತ್ತಮ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಅವರ ವಿರುದ್ದ ಸುಮಾರು 40 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಿವಿಧ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ  9 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಜಯ ಸಾಧಿಸಿದರೆ 2 ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಎಸ್.ಡಿ.ಪಿ.ಐ. ತನ್ನ ವಶದಲ್ಲಿದ್ದ ಸ್ಥಾನವನ್ನು ಕಳೆದುಕೊಂಡಿದೆ.

ಬಂಟ್ವಾಳ ಪುರಸಭೆಯಲ್ಲಿ ಪುರುಷೋತ್ತಮ ಪೂಜಾರಿ, ಸಜೀಪ ಮೂಡ ಗ್ರಾಮ ಪಂಚಾಯತ್ ಕರೀಂ, ಪಂಜಿಕಲ್ಲು ಕೇಶವ, ರಾಜೇಶ್ ಗೌಡ, ಬಡಗಬೆಳ್ಳೂರು ಮೋಹನ್ ದಾಸ ಕೊಟ್ಟಾರಿ, ಅಮ್ಟಾಡಿ ಕೇಶವ ಜೋಗಿ, ಕೊಡಂಬೆಟ್ಟು ಜಯಂತಿ ಸತೀಶ್ ಪೂಜಾರಿ, ಮಂಚಿ ರಾಜೇಶ್ ನೂಜಿಪ್ಪಾಡಿ, ಸಜೀಪ ಮುನ್ನೂರು ಇಸ್ಮಾಯಿಲ್ ನಂದಾವರ ಕೋಟೆ, ಧನಂಜಯ ಶೆಟ್ಟಿ ಮರ್ತಾಜೆ, ಸೆಲಿನಾ ಡಿಸೋಜ ಹಾಗೂ ಬಿಳಿಯೂರು ನಳಿನಿ ಅವರು ವಿಜೇತರಾಗಿದ್ದಾರೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page