March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾರಾಯಣ ಗುರುಗಳು ಸಮಾನತೆಯ ವಿಶ್ವಮಾನವತೆಯ ಪ್ರತಿಪಾದಕರು – ಸ್ಮಿತೇಶ್ ಬಾರ್ಯ

ಬಂಟ್ವಾಳ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪ್ರಜ್ಞೆಯ ಅದ್ವೈತಿ ಸಂತರಂತೆ, ಎಲ್ಲರೂ ದೇವರ ಸೃಷ್ಟಿ, ಸರ್ವಜೀವಗಳಲ್ಲಿ ಸಮಾನತೆಯನ್ನೂ, ವಿಶ್ವಮಾನವತೆಯನ್ನೂ ಗುರುಗಳು ಪ್ರತಿಪಾದಿಸಿದರು ಎಂದು  ರಂಗಭೂಮಿ, ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ತಿಳಿಸಿದರು. ಅವರು ನವಂಬರ್ 28ರಂದು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ  ಕುಡುಪು ರಾಜೇಶ್ ಬಿ. ಮೆಸ್ಕಾಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 22 ನೇ ಮಾಲಿಕೆಯಲ್ಲಿ ಗುರು ಸಂದೇಶ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ್ ಕುಂಪಲ, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕ ಮಹೇಶ್ ಬೊಳ್ಳಾಯಿ, ಉದಯ್ ಮೆನಾಡು, ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರ, ರಾಜೇಶ್ ಸುವರ್ಣ, ಸದಸ್ಯರಾದ, ಪ್ರಶಾಂತ್ ಏರಮಲೆ, ಸುದೀಪ್ ರಾಯಿ, ಯತೀಶ್ ಬೊಳ್ಳಾಯಿ, ಸೂರಜ್ ತುಂಬೆ, ಜಗನ್ನಾಥ್ ಸುವರ್ಣ ಕಲ್ಲಡ್ಕ, ಹರೀಶ್ ಅಜೆಕಲ, ಅರ್ಜುನ್ ಅರಳ, ಮೆಸ್ಕಾಂ ಕುಲಶೇಖರದ ಮೇಲ್ವಿಚಾರಕರಾದ ಬಾಲಕೃಷ್ಣ, ಜಯಪ್ರಕಾಶ್ ಹಾಗೂ ಮೆಸ್ಕಾಂ ವಾಮಂಜೂರು ಶಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುರುಸಂದೇಶ ನೀಡಿದ ಸ್ಮಿತೇಶ್ ಬಾರ್ಯ ಹಾಗೂ ಪ್ರಜಿತ್ ಅಮೀನ್ ಇವರನ್ನು ರಾಜೇಶ್ ಬಿ. ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page