January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ – ಸೂರಿಕುಮೇರು ಯುನಿಟ್ ನಿಂದ ಪೋಸ್ಟರ್ ಪ್ರದರ್ಶನ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಇದರ ಸದಸ್ಯತ್ವ ಅಭಿಯಾನವು ಡಿಸೆಂಬರ್ 1 ರಿಂದ 20ರ ತನಕ ನಡೆಯಲಿದ್ದು ಅದರ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಸೂರಿಕುಮೇರು ಜಂಕ್ಷನ್ ಬಳಿ ನಡೆಯಿತು.

-ನಮ್ಮ ಮಕ್ಕಳು ಮನೆಗೂ ಮಾರಿ ಊರಿಗೂ ಮಾರಿಯಾಗಬಾರದು.

-ನಮ್ಮ ಮಕ್ಕಳು ತಂದೆ ತಾಯಿಗೂ ಊರಿನವರಿಗೂ ತಲೆ ನೋವಾಗಬಾರದು.

-ನಮ್ಮ ಮಕ್ಕಳು ಪಾಶ್ಚಾತ್ಯ ವಸ್ತ್ರ ಸಂಹಿತೆ ಪಾಲಿಸುವವರಾಗಬಾರದು.

-ನಮ್ಮ ಮಕ್ಕಳು ವಿಕೃತವಾಗಿ ತಲೆಕೂದಲು ಬೆಳೆಸುವವರಾಗಬಾರದು.

-ನಮ್ಮ ಮಕ್ಕಳು ಗಾಂಜಾ ವ್ಯಸನಿಗಳಾಗಬಾರದು.

-ನಮ್ಮ ಮಕ್ಕಳು ನಮಾಝ್ ಮಾಡದ ಜಾಹಿಲ್ ಗಳಾಗಬಾರದು.

-ನಮ್ಮ ಮಕ್ಕಳು ಮರಣಹೊಂದಿದ ತಂದೆ ತಾಯಿಯನ್ನು ಮುಶ್ರಿಕ್ ಆಗಿ ಮರಣಹೊಂದಿದವರು ಎಂದು ನಂಬುವ ನೂತನವಾದಿಗಳಾಗಬಾರದು.

-ನಮ್ಮ ಮಕ್ಕಳು ಆಲಿಂಗಳನ್ನು ನಿಂದಿಸುವ, ಅಹ್ಲ್‌ಬೈತ್ ಕುಟುಂಬದ ತಂಙಳ್ ಗಳ ನಿಂದಕರಾಗಬಾರದು.

-ನಮ್ಮ ಮಕ್ಕಳು ಚಾಲಿಪೋಲಿ ಕ್ರಿಮಿನಲ್ ಗಳಾಗಬಾರದು.

-ನಮ್ಮ ಮಕ್ಕಳು ಅಹ್ಲ್ ಸುನ್ನತ್ ವಲ್ ಜಮಾ‌ಅತ್ ನಲ್ಲಿ ಗಟ್ಟಿಯಾಗಿ ನೆಲೆಯೂರಿ ಈಮಾನ್ ಕಾಪಾಡಿಕೊಳ್ಳುವ ಸಜ್ಜನ ವ್ಯಕ್ತಿಯಾಗಬೇಕು ಅದಕ್ಕಿರುವ ಏಕೈಕ ದಾರಿ ಎಸ್ಸೆಸ್ಸೆಫ್ ನಲ್ಲಿ ಸದಸ್ಯತನ ಪಡೆದು ಉಲಮಾ ಪರಂಪರೆಯಲ್ಲಿ ತರಬೇತುಗೊಳ್ಳುವುದು ಎಂಬ ಘೋಷವಾಕ್ಯಗಳೊಂದಿಗೆ ಪೋಸ್ಟರ್ ಪ್ರದರ್ಶನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಾಯಕರುಗಳಾದ ಹನೀಫ್ ಸಂಕ, ಸೂರಿಕುಮೇರುವಿನ ಅಝೀಂ, ಕರೀಂ, ಫಾರೂಕ್, ಉಮ್ಮರ್, ಆಶಿಕ್ ಹಾಗೂ ಮಿದ್ಲಾಜ್, ಮಾಣಿಯ ಇಬ್ರಾಹಿಂ ಮತ್ತು ಸಲೀಂ ಹಾಗೂ ಬರಿಮಾರುವಿನ ಅಬ್ದುಲ್ ಖಾದರ್  ಉಪಸ್ಥಿತರಿದ್ದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page