January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟುಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವಂಬರ್ 28ರಂದು ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟುಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಎಂಜಿನೀಯರಿಂಗ್ ಪಠ್ಯಕ್ರಮದಲ್ಲಿ ಇಂಟರ್ನ್ ಶಿಪ್ ಕಡ್ಡಾಯ ವಿಭಾಗವಾಗಿರುವುದರಿಂದ ಈ ಒಪ್ಪಂದವು ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ.

ಮಂಜುನಾಥ್ ನಾಯಕ್, ಪ್ರಾಂಶುಪಾಲರು, ಜಿಟಿಟಿಸಿ, ಉಡುಪಿ, ಜಿಟಿಟಿಸಿಯ ಉಪನ್ಯಾಸಕರಾದ ದುರ್ಗಾಪ್ರಸಾದ್ ಶೆಟ್ಟಿ ಮತ್ತು ವಿಪಿನ್ ಕುಮಾರ್ ಉಪಸ್ಥಿತರಿದ್ದರು. ನಿಟ್ಟೆಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು ಇಂತಹ ಇಂಟರ್ನ್ ಶಿಪ್ ಗಳ  ಮೂಲಕ ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ಪುನರುಚ್ಚರಿಸಿದರು. ನಿಟ್ಟೆ ಕಾಲೇಜಿನ ಐಐಸಿ ನಿರ್ದೇಶಕ ಡಾ. ಪರಮೇಶ್ವರನ್, ಉಪಪ್ರಾಂಶುಪಾಲ ಡಾ. ಐ. ರಮೇಶ್ ಮಿತ್ತಂತಾಯ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ ಪೈ, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ, ರೊಬೊಟಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಮುರಳೀಧರ, ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಕೆ.ವಿ.ಎಸ್.ಎಸ್. ಸಾಯಿಯಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ. ಅನಂತಕೃಷ್ಣ ಸೋಮಯಾಜಿ ಮತ್ತು ಡಾ. ಅಜಿತ್ ಹೆಬ್ಬಾಳೆ ಕಾರ್ಯಕ್ರಮ ಸಂಯೋಜಿಸಿದರು.

 

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page