February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇರ್ವತ್ತೂರು ಪದವು – ವಾರ್ಷಿಕ ಬದ್ರ್ ಮೌಲಿದ್ ಪೋಸ್ಟರ್ ಬಿಡುಗಡೆ.

ಬಂಟ್ವಾಳ : ಇರ್ವತ್ತೂರು ಪದವು ಬದ್ರಿಯಾ ಜುಮಾ ಮಸೀದಿ ಹಾಗೂ ಬದ್ರಿಯಾ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ವಾರ್ಷಿಕ ಬದ್ರ್ ಮೌಲಿದ್ ಪ್ರಯುಕ್ತ ಏಕದಿನ ಮತ ಪ್ರಭಾಷಣ ಹಾಗೂ ಸನ್ಮಾನ ಕಾರ್ಯಕ್ರಮ ದಶಂಬರ್  17ರಂದು ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಅಲ್ ಹಾಫಿಳ್ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಕೇರಳ ಭಾಗವಹಿಸಲಿದ್ದಾರೆ.

ಈ ಪ್ರಯುಕ್ತ ಜಮಾಅತ್ ಖತೀಬ ಉಮರ್ ಮದನಿ ನೇತೃತ್ವದಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಮಸೀದಿ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಲ್ ಖಾದಿಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಹಂಝ ಸಖಾಫಿ, ಶಿಕ್ಷಕ ರಫೀಕ್ ಮದನಿ, ಬದ್ರಿಯಾ ಜುಮಾ ಮಸೀದಿಯ  ಅಧ್ಯಕ್ಷ  ಸೇವಾ ಹಾಮದಾಕ,  ಮಾಜಿ ಅಧ್ಯಕ್ಷ ಪಿ.ಕೆ. ಇದ್ದಿನಬ್ಬ, ಅಬ್ದುಲ್ ಲತೀಫ್ ಕಲಾ ಬಾಗಿಲು, ಪಂಜೋಡಿ ಅಬ್ದುಲ್ ಹಮೀದ್, ಕಾರ್ಯದರ್ಶಿ ಮುನೀರ್ ಅಹ್ಮದ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಪಿ. ಮೊಹಮ್ಮದ್ ರಫೀಕ್, ಸದಸ್ಯರಾದ ಅಬ್ದುಲ್ ರಹಿಮಾನ್, ಅಬೂಬಕ್ಕರ್ ಅಂಕರ್ಜಾಲ್, ನಿಸಾರ್ ಅಹಮದ್ ಇರ್ವತ್ತೂರು, ಟಿ.ಕೆ. ನವಾಝ್, ಬದ್ರಿಯಾ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಹಾಫಿಳ್, ಅನಿವಾಸಿ ಭಾರತೀಯ ಕತ್ತಾರ್ ಉದ್ಯಮಿ ಝಹೀರ್ ಅಹ್ಮದ್ ಮತ್ತಿತರು ಉಪಸ್ಥಿತರಿದ್ದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page