April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿ.ಸಿ. ರೋಡ್ ಲಯನ್ಸ್ ಕ್ಲಬ್ ನಲ್ಲಿ ಮುಸ್ಲಿಂ ಸಮಾಜ ಬಂಟ್ವಾಳ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರ “ಸಮಾಲೋಚನಾ ಸಭೆ”

ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ನೇತೃತ್ವದಲ್ಲಿ ತಾಲೂಕಿನ  ವಿವಿಧ ಸಂಘಟನೆಗಳ ಮುಖಂಡರ “ಸಮಾಲೋಚನಾ ಸಭೆ” ಯು.ಬಿ.ಸಿ. ರೋಡಿನ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನ್ಯಾಯವಾದಿ ಇಂತಿಯಾಝ್ ಮಾತನಾಡಿ, ಭಾರತದಲ್ಲಿ ಮುಸ್ಲಿಮರು ಎದುರಿಸುತ್ತಿರುವ ಕಾನೂನಾತ್ಮಕ ಸವಾಲುಗಳು ಮತ್ತು ಪರಿಹಾರೋಪಾಯಗಳ ಬಗ್ಗೆ ವಿಸ್ತೃತವಾಗಿ ವಿವರಿಸಿದರು.

ರಾಷ್ಟ್ರೀಯ ವಕ್ಫ್ ಹೋರಾಟ ಸಮಿತಿ ಸದಸ್ಯ ಇಲ್ಯಾಸ್ ಮುಹಮ್ಮದ್ ತುಂಬೆಯವರು ಮಾತನಾಡಿ, ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮೂಲಕ ಮುಸ್ಲಿಮರ ಹಕ್ಕುಗಳನ್ನು ಕಸಿಯಲು ಯಾವೆಲ್ಲಾ ಷಡ್ಯಂತ್ರಗಳನ್ನು ರೂಪಿಸುತ್ತಿವೆ ಎಂಬುದರ ಬಗ್ಗೆ ಮಾಹಿತಿ ನೀಡಿದರು. ಮುಸ್ಲಿಂ ಸಮಾಜ ಬಂಟ್ವಾಳ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ ವಿಷಯ ಮಂಡನೆಯ ಬಳಿಕ ನಡೆದ ಚರ್ಚೆಯಲ್ಲಿ ವಿವಿಧ ಸಂಘಟನೆಯ ಮುಖಂಡರಿಂದ ಸಲಹೆ, ಸೂಚನೆಗಳನ್ನು ಸ್ವೀಕರಿಸಿದರು. ಮುಸ್ಲಿಂ ಸಮಾಜ ಅಧ್ಯಕ ಅಬೂಬಕ್ಕರ್ ಕೆ.ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ಧರು. ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಮ್ಯೂಸಿಯಂ ಸ್ಥಾಪಕ ಮೊಹಮ್ಮದ್ ಯಾಸಿರ್ ಅವರನ್ನು ಸನ್ಮಾನಿಸಲಾಯಿತು.

ಮುಸ್ಲಿಂ ಸಮಾಜ ಗೌರವಾಧ್ಯಕ್ಷ ಬಿ.ಎಚ್. ಖಾದರ್ ಬಂಟ್ವಾಳ, ಪಿ.ಎ. ರಹೀಂ ಉಪಸ್ಥಿತರಿದ್ಧರು. ಮುಸ್ಲಿಂ ಸಮಾಜ ಉಪಾಧ್ಯಕ್ಷ ಅಬ್ಬಾಸ್ ಅಲಿ ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮುಹಮ್ಮದ್ ಬಂಟ್ವಾಳ ಸ್ವಾಗತಿಸಿ, ಇಕ್ಬಾಲ್ ಐ.ಎಮ್.ಆರ್. ವಂದಿಸಿದರು. ಝೈನುಲ್ ಅಕ್ಬರ್ ಕಡೇಶ್ವಾಲ್ಯ ಮತ್ತು ಮುಸ್ತಾಕ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page