February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ವಿಜಯಪುರದ ಸಮೈರಾ ಮಡಲಿಗೆ

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಸಮೈರಾ ಎಂಬ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ತನ್ನ ಮಡಿಲಿಗೆ ಗಿಟ್ಟಿಸಿಕೊಂಡು ವಿಜಯಪುರ ಹಾಗೂ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ. 18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ. ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣಿಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಇವರ ಸಾಧನೆ ಪ್ರೇರಣೆ ಆಗಿದೆ.

You may also like

News

ಮಂಗಳೂರಿನ ಅತ್ತಾವರ KMC ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆ – ‘ವಿದ್ಯಾ ಸಂಕಲ್ಪ’ ವೆಬ್‌ಸೈಟ್ ಲೋಕಾರ್ಪಣೆ

ಕ್ಯಾನ್ಸರ್ ಕೇವಲ ದೈಹಿಕವಲ್ಲದೆ ಕುಟುಂಬದ ಮೇಲೆ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನೂ ಹೇರುತ್ತದೆ – ಡಾ. ಹರ್ಷ ಪ್ರಸಾದ್ ಎಲ್. ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್
News

SCDCC ಬ್ಯಾಂಕ್‌ನಿಂದ ಡಿಜಿಟಲ್ ಕ್ರಾಂತಿ – UPI ಹಾಗೂ IMPS ಸೇವೆಗಳಿಗೆ ಚಾಲನೆ

ತಂತ್ರಜ್ಞಾನದ ಯುಗದಲ್ಲಿ ಸಹಕಾರಿ ವಲಯದ ಬ್ಯಾಂಕಿಂಗ್ ಸೇವೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ (SCDCC) ಬ್ಯಾಂಕ್ ತನ್ನ ಗ್ರಾಹಕರಿಗೆ ಯುಪಿಐ (UPI)

You cannot copy content of this page