September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ವಿಜಯಪುರದ ಸಮೈರಾ ಮಡಲಿಗೆ

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಸಮೈರಾ ಎಂಬ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ತನ್ನ ಮಡಿಲಿಗೆ ಗಿಟ್ಟಿಸಿಕೊಂಡು ವಿಜಯಪುರ ಹಾಗೂ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ. 18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ. ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣಿಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಇವರ ಸಾಧನೆ ಪ್ರೇರಣೆ ಆಗಿದೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page