January 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಜನರಿಂದ ನಾನು ಮೇಲೆ ಬಂದೆ” ಎಂದ – ನಿರ್ದೇಶಕ ನವಿಲುಗರಿ ನವೀನ್ ಪಿ.ಬಿ.

ಇತ್ತೀಚಿಗೆ ಬಿಡುಗೆಗೊಂಡ ಲೆಜೆಂಡ್ ಡೈರೆಕ್ಟರ್ ಸಿನಿಮಾ ಗೆಲುವಿನ ಒಂದು ತಿಂಗಳ ಸಂಭ್ರಮಾಚರಣೆಯನ್ನು ಆಚರಿಸಿಕೊಂಡಿತ್ತು. ಈ ಸಮಾರಂಭದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾಗಾಗಿ ದುಡಿದ ಕಲಾವಿದರಿಗೆ, ತಾಂತ್ರಿಕ ವರ್ಗದವರಿಗೆ ಹಾಗೂ ಸಿನಿಮಾ ಗೆಲುವಿಗೆ ಕಾರಣೀಭೂತರಾದ ಅಭಿಮಾನಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಇದೇ ಸಂತೋಷದ ಸಮಯದಲ್ಲಿ ಹ್ಯಾಟ್ರಿಕ್ ವರ್ಲ್ಡ್ ರೆಕಾರ್ಡ್ ಹೋಲ್ಡರ್ ಆದ ನಟ, ನಿರ್ದೇಶಕ ನವಿಲುಗರಿ ನವೀನ್ ಪಿ.ಬಿ. ಇವರ ನೂತನ ಚಿತ್ರ “ಜನರಿಂದ ನಾನು ಮೇಲೆ ಬಂದೆ”  ಎಂಬ  ಟೈಟಲ್ ಕೂಡ ಅನಾವರಣಗೊಂಡಿತ್ತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರು, ವಿತರಕರು ಹಾಗೂ ಪ್ರದರ್ಶಕರಾದ ಎಸ್.ಎ. ಚಿನ್ನೇಗೌಡರು, ಶೈಲಜಾ ದ್ವಾರಕೀಶ್, ದೇವರಾಜ್ ಗೌಡ, ಗಂಡಸಿ ಸದಾನಂದ ಸ್ವಾಮಿ, ಸತ್ಯಜಿತ್, ರಮಣ ಕಣಗಾಲ್, ಶಿವಕುಮಾರ್ ಆರಾಧ್ಯ, ಸಂದೀಪ್ ಮಾಲನಿ, ಶಿವಣ್ಣ, ಗಂಧರ್ವ ರಾಜ್, ವಿಶಾಲ ಸತೀಶ್ ಹಾಗೂ ಪ್ರಣವ್ ಸತೀಶ್  ಉಪಸ್ಥಿತರಿದ್ದರು.

ಜನರಿಂದ ನಾನು ಮೇಲೆ ಬಂದೆ ಸಿನಿಮಾದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾದಲ್ಲಿ ಜನ ಮೆಚ್ಚಿದ ಕುಚುಕು ಜೋಡಿ ಆದ ಗಂಧರ್ವ ರಾಜ್ (ಶಂಕರ) ಮತ್ತು ನವಿಲುಗರಿ ನವೀನ್ ಪಿ.ಬಿ. ಇಬ್ಬರು ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶದ ಜವಾದ್ದರಿಯನ್ನು ನವಿಲುಗರಿ ನವೀನ್ ಪಿ.ಬಿ. ಹೊತ್ತುಕೊಂಡಿದ್ದಾರೆ. ಮೊದಲ ಬಾರಿ ನಿರ್ಮಾಪಕರಾಗಿ ಹೇಮಾವತಿ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಅತೀ ಶ್ರೀಘ್ರದಲ್ಲೇ ಚಿತ್ರೀಕರಣ ಶುರುಮಾಡಲಿದ್ದೇವೇ ಎಂದು ಚಿತ್ರದ ನಿರ್ದೇಶಕರು ತಿಳಿಸಿದರು.

You may also like

News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ
News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ

You cannot copy content of this page