June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಲನಚಿತ್ರ ನಟ ಉಪೇಂದ್ರ  ಬಂಟ್ವಾಳದ ಮೊಡಂಕಾಪು ವನದುರ್ಗ ದೇವಸ್ಥಾನಕ್ಕೆ ಭೇಟಿ

ಬಂಟ್ವಾಳ :  ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಅವರು  ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ದಶಂಬರ್ 3ರಂದು ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಅವರು ಸ್ವತಃ ನಿರ್ದೇಶಿಸಿ ನಟಿಸಿರುವ ಹೊಸ ಚಲನಚಿತ್ರ ‘ಯುಐ’ ಯಶಸ್ವಿಯಾಗಲೆಂದು ವನದುರ್ಗಾ ಕ್ಷೇತ್ರದಲ್ಲಿ ಸರ್ವಾಂಲಂಕಾರ ಸೇವೆ ಸಲ್ಲಿಸಿದರು. ಮಧ್ಯಾಹ್ನ ಪೂಜೆ ಬಳಿಕ ಕ್ಷೇತ್ರದಲ್ಲಿ ಅನ್ನದಾನ ಪ್ರಸಾದ ಪಡೆದು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಚಲನಚಿತ್ರ ನಿರ್ಮಾಪಕ ಶ್ರೀಕಾಂತ್, ಸಂಗೀತ ನಿರ್ದೇಶಕ ವೇಲುಹರಿ, ನವೀನ್ ಮನೋಹರ್ ಅವರ ಜೊತೆಗಿದ್ದರು. ಮೊಡಂಕಾಪು ವನದುರ್ಗ ಕ್ಷೇತ್ರದ ಗುರುದತ್ ಶೆಣೈ, ಪಾಂಡುರಂಗ ಶೆಣೈ ಉಪಸ್ಥಿತರಿದ್ದರು. ಮೊಡಂಕಾಪು ಕ್ಷೇತ್ರದಲ್ಲಿರುವ ವಿಶೇಷ ಕರೆಯ ಬಗ್ಗೆ ರಾಜೇಶ್ ಭಟ್ ಮಾಹಿತಿ ನೀಡಿದರು.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page