April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದ ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು

ವಿಟ್ಲ : ಆಟೋ ಚಾಲಕನೋರ್ವ  ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ 28ವರ್ಷ ಪ್ರಾಯದ ಧನರಾಜ್‌ ನಾಪತ್ತೆಯಾದ ಆಟೋ ಚಾಲಕ.

ಈತ ನವೆಂಬರ್ 28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಕ್ಕೆ ತನ್ನ ಅಟೋ ರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ದಶಂಬರ್ 03ರ ವರೆಗೂ ಮನೆಗೆ ಬಂದಿರುವುದಿಲ್ಲ ಈ ಬಗ್ಗೆ  ಸಂಬಂದಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್‌ ನಂಬ್ರ 9008117093 ಸ್ವೀಚ್‌ ಆಫ್‌ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page