January 14, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದುಲ್ ಪುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ, ಮತ್ತು ದುಲ್ ಪುಖಾರ್ ಗಲ್ಫ್ ಕಮಿಟಿ ವತಿಯಿಂದ ರಕ್ತದಾನ ಶಿಬಿರ ಸಾಧಕರಿಗೆ ಸನ್ಮಾನ, ಮತ್ತು ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ

ಬಂಟ್ವಾಳ : ದುಲ್ ಪುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ, ಮತ್ತು ದುಲ್ ಪುಖಾರ್ ಗಲ್ಫ್ ಕಮಿಟಿ ವತಿಯಿಂದ ಇಪ್ಪತ್ತೈದನೇ ವಾರ್ಷಿಕೋತ್ಸವದ ಪ್ರಯುಕ್ತ  ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಹಾಗೂ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ ಕಾರ್ಯಕ್ರಮ ಕನ್ಯಾನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶೈಖುನಾ ಕನ್ಯಾನ ಉಸ್ತಾದ್, ಕುಕ್ಕಾಜೆ ಉಸ್ತಾದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನ್ವರ್ ಕರೊಪಾಡಿ, ಟ್ರಸ್ಟ್ ಅಧ್ಯಕ್ಷ ಆಸಿಫ್ ಬನಾರಿ, ಎಸ್.ಡಿ.ಪಿ.ಐ. ಮುಖಂಡ ಶಾಕಿರ್ ಅಳಕೆಮಜಲು, ಎಂ.ಕೆ. ಮಹಮ್ಮದ್ ಕುಂಞ್ಞ ಹಾಜಿ, ಟ್ರಸ್ಟ್ ಗೌರವಾಧ್ಯಕ್ಷ ಅಬ್ದುಲ್ ಖಾದರ್ ಸಅದಿ, ಮಾಜಿ ಗೌರವಾಧ್ಯಕ್ಷ ಅಶ್ರಫ್ ಮದನಿ, ಕನ್ಯಾನ ಕ್ಲಸ್ಟರ್ ಸಿ.ಆರ್.ಪಿ. ಚಂದ್ರಶೇಖರ, ಮಹಮ್ಮದ್ ಹಾಜಿ ಪರಕ್ಕಾಜೆ, ಗಲ್ಫ್ ಕಮಿಟಿ ಪ್ರತಿನಿಧಿ ಅಲ್ತಾಫ್ ಮರಾಟಿಮೂಲೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಬ್ದುಲ್ ಬಶೀರ್ ಚೆಡವು ಸ್ವಾಗತಿಸಿ, ವಂದಿಸಿದರು.

You may also like

News

ಕಥೊಲಿಕ್ ಸಭಾ ಶಂಭೂರು ಘಟಕದ ಬೆಳ್ಳಿಹಬ್ಬ ಸಂಭ್ರಮದಿಂದ ಆಚರಣೆ

ಸೇವೆ, ತ್ಯಾಗ ಮತ್ತು ಒಗ್ಗಟ್ಟು ಶಂಭೂರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ  – ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್
News

ಪೋಪ್ ಫ್ರಾನ್ಸಿಸ್‍ರವರಿಗೆ `ಮೆಡಲ್ ಆಫ್ ಫ್ರೀಡಂ’ ಗೌರವ ನೀಡಿದ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಜನವರಿ 11ರಂದು ಶನಿವಾರ ಫೋನ್ ಕರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಅಧ್ಯಕ್ಷೀಯ `ಸ್ವಾತಂತ್ರ್ಯ ಪದಕ’ ಪ್ರದಾನ ಮಾಡಿದರು ಎಂದು

You cannot copy content of this page