September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ಪ್ರತಿಷ್ಟಾ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಭುವನೇಶ್ ಪಚಿನಡ್ಕ ಆಯ್ಕೆ

ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು.

ಪ್ರತಿಷ್ಟ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಶುಭಲಕ್ಷ್ಮೀ ಸಮೂಹ ಸಂಸ್ಥೆಯ ಮಾಲಕರು, ಸಾಮಾಜಿಕ, ಧಾರ್ಮಿಕ ಮುಖಂಡರು ಭುವನೇಶ್ ಪಚಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ರತ್ನಾಕರ ಪೂಜಾರಿ ಮದಂಗೋಡಿ, ಕೋಶಾಧಿಕಾರಿಯಾಗಿ ಪ್ರವೀಣ್ ಕುಪ್ಪೆಟ್ಟು, ಗೌರವಾಧ್ಯಕ್ಷರುಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಸತೀಶಚಂದ್ರ ಪಾನಿಲ ಮತ್ತು ಯಾದವ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಟ್ರಸ್ಟ್ ನ ಅಧ್ಯಕ್ಷ ಹರೀಶ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು, ಸತೀಶ್ ಪೂಜಾರಿ ಅಲಕ್ಕೆ, ದೇವಪ್ಪ ಕರ್ಕೇರ, ಜಗದೀಶ್ ಕೊಯಿಲ ಉಪಸ್ಥಿತರಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page