January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ಪ್ರತಿಷ್ಟಾ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಭುವನೇಶ್ ಪಚಿನಡ್ಕ ಆಯ್ಕೆ

ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು.

ಪ್ರತಿಷ್ಟ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಶುಭಲಕ್ಷ್ಮೀ ಸಮೂಹ ಸಂಸ್ಥೆಯ ಮಾಲಕರು, ಸಾಮಾಜಿಕ, ಧಾರ್ಮಿಕ ಮುಖಂಡರು ಭುವನೇಶ್ ಪಚಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ರತ್ನಾಕರ ಪೂಜಾರಿ ಮದಂಗೋಡಿ, ಕೋಶಾಧಿಕಾರಿಯಾಗಿ ಪ್ರವೀಣ್ ಕುಪ್ಪೆಟ್ಟು, ಗೌರವಾಧ್ಯಕ್ಷರುಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಸತೀಶಚಂದ್ರ ಪಾನಿಲ ಮತ್ತು ಯಾದವ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಟ್ರಸ್ಟ್ ನ ಅಧ್ಯಕ್ಷ ಹರೀಶ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು, ಸತೀಶ್ ಪೂಜಾರಿ ಅಲಕ್ಕೆ, ದೇವಪ್ಪ ಕರ್ಕೇರ, ಜಗದೀಶ್ ಕೊಯಿಲ ಉಪಸ್ಥಿತರಿದ್ದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page